ಪುತ್ತೂರು: ಸಾರಸ್ವತ ಲರ್ನಿಂಗ್ ಫೌಂಡೇಶನ್ ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇವರ ಸಹಕಾರದೊಂದಿಗೆ ಯುವ ಸಬಲೀಕರಣ ಮತ್ತು ವ್ಯಕ್ತಿತ್ವ ವಿಕಸನ ಯೋಜನೆಯಡಿ ಅಂತರಾಷ್ಟ್ರೀಯ ತರಬೇತುದಾರರಾದ ಸುಬ್ರಹ್ಮಣ್ಯ ಕುಳೇದು ಇವರಿಂದ 10ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಸಕ್ಸಸ್ ಟ್ರೈನಿಂಗ್” ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮವು ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಂಜಿಂಗ್ ಟ್ರಸ್ಟಿ ಎಸ್ ಆರ್ ಸತೀಶ್ಚಂದ್ರ ನೆರವೇರಿಸಿ,” ನಾವು ಯಾವುದೇ ನಕಾರಾತ್ಮಕ ವಿಚಾರಗಳ ಗಮನಕೊಡದೆ ಸಕಾರಾತ್ಮಕವಾಗಿಯೇ ಯೋಚಿಸಬೇಕು, ಪ್ರಪಂಚವು ವಿಶಾಲವಾಗಿದೆ ಅವಕಾಶಗಳ ಆಗರವಾದ ಈ ವಿಶಾಲ ಪ್ರಪಂಚದಲ್ಲಿ ದೊಡ್ಡ ಗುರಿಯನ್ನಿಟ್ಟುಕೊಂಡು ಸಾಧನೆಯೆಡೆಗೆ ಅವಿರತವಾಗಿ ಶ್ರಮವಹಿಸಬೇಕು, ಎಲ್ಲಾ ರೀತಿಯ ಸೌಲಭ್ಯಗಳಿರುವ ಈ ಕಾಲದಲ್ಲಿ ನಾವು ಅವಕಾಶಗಳನ್ನು ಸದುಪಯೋಗಪಡಸಿಕೊಂಡು ಯಶಸ್ವೀ ವ್ಯಕ್ತಿಗಳಾಗಬೇಕು” ಎಂದು ಹೇಳಿದರು.
ವೇದಿಕೆಯಲ್ಲಿ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಸುನಿಲ್ ಬೋರ್ಕರ್ ಉಪಸ್ಥಿತರಿದ್ದರು. ಸುಮಾರು 100 ಜನ ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು. ಕುಮಾರಿ ಸಿಂಧು ಪ್ರಭು ಮತ್ತು ಅಮೃತಾಂಬ ಅವರ ವೇದಮಂತ್ರದೊಂದಿಗೆ ಕಾರ್ಯಕ್ರಮ ಮೊದಲ್ಗೊಂಡಿತು. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ ಬಿಪಿನ್ ಚಂದ್ರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…