Advertisement
ಸುದ್ದಿಗಳು

ಧನಾತ್ಮಕ ಚಿಂತನೆಗಳು ವ್ಯಕ್ತಿಯನ್ನು ಸಾಧನೆಯೆಡೆಗೆ ಕೊಂಡೊಯ್ಯುತ್ತದೆ – ಎಸ್ ಆರ್ ಸತೀಶ್ಚಂದ್ರ

Share

ಪುತ್ತೂರು: ಸಾರಸ್ವತ ಲರ್ನಿಂಗ್ ಫೌಂಡೇಶನ್ ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇವರ ಸಹಕಾರದೊಂದಿಗೆ ಯುವ ಸಬಲೀಕರಣ ಮತ್ತು ವ್ಯಕ್ತಿತ್ವ ವಿಕಸನ ಯೋಜನೆಯಡಿ ಅಂತರಾಷ್ಟ್ರೀಯ ತರಬೇತುದಾರರಾದ  ಸುಬ್ರಹ್ಮಣ್ಯ ಕುಳೇದು ಇವರಿಂದ 10ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಸಕ್ಸಸ್ ಟ್ರೈನಿಂಗ್” ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮವು ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ನಡೆಯಿತು.

Advertisement
Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಮ್ಯಾನೇಂಜಿಂಗ್ ಟ್ರಸ್ಟಿ  ಎಸ್ ಆರ್ ಸತೀಶ್ಚಂದ್ರ ನೆರವೇರಿಸಿ,” ನಾವು ಯಾವುದೇ ನಕಾರಾತ್ಮಕ ವಿಚಾರಗಳ ಗಮನಕೊಡದೆ ಸಕಾರಾತ್ಮಕವಾಗಿಯೇ ಯೋಚಿಸಬೇಕು, ಪ್ರಪಂಚವು ವಿಶಾಲವಾಗಿದೆ ಅವಕಾಶಗಳ ಆಗರವಾದ ಈ ವಿಶಾಲ ಪ್ರಪಂಚದಲ್ಲಿ ದೊಡ್ಡ ಗುರಿಯನ್ನಿಟ್ಟುಕೊಂಡು ಸಾಧನೆಯೆಡೆಗೆ ಅವಿರತವಾಗಿ ಶ್ರಮವಹಿಸಬೇಕು, ಎಲ್ಲಾ ರೀತಿಯ ಸೌಲಭ್ಯಗಳಿರುವ ಈ ಕಾಲದಲ್ಲಿ ನಾವು ಅವಕಾಶಗಳನ್ನು ಸದುಪಯೋಗಪಡಸಿಕೊಂಡು ಯಶಸ್ವೀ ವ್ಯಕ್ತಿಗಳಾಗಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಸುನಿಲ್ ಬೋರ್ಕರ್ ಉಪಸ್ಥಿತರಿದ್ದರು. ಸುಮಾರು 100 ಜನ ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು. ಕುಮಾರಿ ಸಿಂಧು ಪ್ರಭು ಮತ್ತು ಅಮೃತಾಂಬ ಅವರ ವೇದಮಂತ್ರದೊಂದಿಗೆ ಕಾರ್ಯಕ್ರಮ ಮೊದಲ್ಗೊಂಡಿತು. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ  ಬಿಪಿನ್ ಚಂದ್ರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

2 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

3 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

24 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago