Advertisement
ಸುದ್ದಿಗಳು

ಧನಾತ್ಮಕ ಚಿಂತನೆಗಳು ವ್ಯಕ್ತಿಯನ್ನು ಸಾಧನೆಯೆಡೆಗೆ ಕೊಂಡೊಯ್ಯುತ್ತದೆ – ಎಸ್ ಆರ್ ಸತೀಶ್ಚಂದ್ರ

Share

ಪುತ್ತೂರು: ಸಾರಸ್ವತ ಲರ್ನಿಂಗ್ ಫೌಂಡೇಶನ್ ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇವರ ಸಹಕಾರದೊಂದಿಗೆ ಯುವ ಸಬಲೀಕರಣ ಮತ್ತು ವ್ಯಕ್ತಿತ್ವ ವಿಕಸನ ಯೋಜನೆಯಡಿ ಅಂತರಾಷ್ಟ್ರೀಯ ತರಬೇತುದಾರರಾದ  ಸುಬ್ರಹ್ಮಣ್ಯ ಕುಳೇದು ಇವರಿಂದ 10ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಸಕ್ಸಸ್ ಟ್ರೈನಿಂಗ್” ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮವು ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಮ್ಯಾನೇಂಜಿಂಗ್ ಟ್ರಸ್ಟಿ  ಎಸ್ ಆರ್ ಸತೀಶ್ಚಂದ್ರ ನೆರವೇರಿಸಿ,” ನಾವು ಯಾವುದೇ ನಕಾರಾತ್ಮಕ ವಿಚಾರಗಳ ಗಮನಕೊಡದೆ ಸಕಾರಾತ್ಮಕವಾಗಿಯೇ ಯೋಚಿಸಬೇಕು, ಪ್ರಪಂಚವು ವಿಶಾಲವಾಗಿದೆ ಅವಕಾಶಗಳ ಆಗರವಾದ ಈ ವಿಶಾಲ ಪ್ರಪಂಚದಲ್ಲಿ ದೊಡ್ಡ ಗುರಿಯನ್ನಿಟ್ಟುಕೊಂಡು ಸಾಧನೆಯೆಡೆಗೆ ಅವಿರತವಾಗಿ ಶ್ರಮವಹಿಸಬೇಕು, ಎಲ್ಲಾ ರೀತಿಯ ಸೌಲಭ್ಯಗಳಿರುವ ಈ ಕಾಲದಲ್ಲಿ ನಾವು ಅವಕಾಶಗಳನ್ನು ಸದುಪಯೋಗಪಡಸಿಕೊಂಡು ಯಶಸ್ವೀ ವ್ಯಕ್ತಿಗಳಾಗಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಸುನಿಲ್ ಬೋರ್ಕರ್ ಉಪಸ್ಥಿತರಿದ್ದರು. ಸುಮಾರು 100 ಜನ ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು. ಕುಮಾರಿ ಸಿಂಧು ಪ್ರಭು ಮತ್ತು ಅಮೃತಾಂಬ ಅವರ ವೇದಮಂತ್ರದೊಂದಿಗೆ ಕಾರ್ಯಕ್ರಮ ಮೊದಲ್ಗೊಂಡಿತು. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ  ಬಿಪಿನ್ ಚಂದ್ರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

11 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

11 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

12 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

20 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago