Advertisement
ಸುದ್ದಿಗಳು

ಧನಾತ್ಮಕ ಚಿಂತನೆಗಳು ವ್ಯಕ್ತಿಯನ್ನು ಸಾಧನೆಯೆಡೆಗೆ ಕೊಂಡೊಯ್ಯುತ್ತದೆ – ಎಸ್ ಆರ್ ಸತೀಶ್ಚಂದ್ರ

Share

ಪುತ್ತೂರು: ಸಾರಸ್ವತ ಲರ್ನಿಂಗ್ ಫೌಂಡೇಶನ್ ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇವರ ಸಹಕಾರದೊಂದಿಗೆ ಯುವ ಸಬಲೀಕರಣ ಮತ್ತು ವ್ಯಕ್ತಿತ್ವ ವಿಕಸನ ಯೋಜನೆಯಡಿ ಅಂತರಾಷ್ಟ್ರೀಯ ತರಬೇತುದಾರರಾದ  ಸುಬ್ರಹ್ಮಣ್ಯ ಕುಳೇದು ಇವರಿಂದ 10ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಸಕ್ಸಸ್ ಟ್ರೈನಿಂಗ್” ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮವು ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಮ್ಯಾನೇಂಜಿಂಗ್ ಟ್ರಸ್ಟಿ  ಎಸ್ ಆರ್ ಸತೀಶ್ಚಂದ್ರ ನೆರವೇರಿಸಿ,” ನಾವು ಯಾವುದೇ ನಕಾರಾತ್ಮಕ ವಿಚಾರಗಳ ಗಮನಕೊಡದೆ ಸಕಾರಾತ್ಮಕವಾಗಿಯೇ ಯೋಚಿಸಬೇಕು, ಪ್ರಪಂಚವು ವಿಶಾಲವಾಗಿದೆ ಅವಕಾಶಗಳ ಆಗರವಾದ ಈ ವಿಶಾಲ ಪ್ರಪಂಚದಲ್ಲಿ ದೊಡ್ಡ ಗುರಿಯನ್ನಿಟ್ಟುಕೊಂಡು ಸಾಧನೆಯೆಡೆಗೆ ಅವಿರತವಾಗಿ ಶ್ರಮವಹಿಸಬೇಕು, ಎಲ್ಲಾ ರೀತಿಯ ಸೌಲಭ್ಯಗಳಿರುವ ಈ ಕಾಲದಲ್ಲಿ ನಾವು ಅವಕಾಶಗಳನ್ನು ಸದುಪಯೋಗಪಡಸಿಕೊಂಡು ಯಶಸ್ವೀ ವ್ಯಕ್ತಿಗಳಾಗಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಸುನಿಲ್ ಬೋರ್ಕರ್ ಉಪಸ್ಥಿತರಿದ್ದರು. ಸುಮಾರು 100 ಜನ ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು. ಕುಮಾರಿ ಸಿಂಧು ಪ್ರಭು ಮತ್ತು ಅಮೃತಾಂಬ ಅವರ ವೇದಮಂತ್ರದೊಂದಿಗೆ ಕಾರ್ಯಕ್ರಮ ಮೊದಲ್ಗೊಂಡಿತು. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ  ಬಿಪಿನ್ ಚಂದ್ರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

2 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

21 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago