Advertisement
ಸುದ್ದಿಗಳು

ಧನಾತ್ಮಕ ಚಿಂತನೆಗಳು ವ್ಯಕ್ತಿಯನ್ನು ಸಾಧನೆಯೆಡೆಗೆ ಕೊಂಡೊಯ್ಯುತ್ತದೆ – ಎಸ್ ಆರ್ ಸತೀಶ್ಚಂದ್ರ

Share

ಪುತ್ತೂರು: ಸಾರಸ್ವತ ಲರ್ನಿಂಗ್ ಫೌಂಡೇಶನ್ ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇವರ ಸಹಕಾರದೊಂದಿಗೆ ಯುವ ಸಬಲೀಕರಣ ಮತ್ತು ವ್ಯಕ್ತಿತ್ವ ವಿಕಸನ ಯೋಜನೆಯಡಿ ಅಂತರಾಷ್ಟ್ರೀಯ ತರಬೇತುದಾರರಾದ  ಸುಬ್ರಹ್ಮಣ್ಯ ಕುಳೇದು ಇವರಿಂದ 10ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಸಕ್ಸಸ್ ಟ್ರೈನಿಂಗ್” ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮವು ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಮ್ಯಾನೇಂಜಿಂಗ್ ಟ್ರಸ್ಟಿ  ಎಸ್ ಆರ್ ಸತೀಶ್ಚಂದ್ರ ನೆರವೇರಿಸಿ,” ನಾವು ಯಾವುದೇ ನಕಾರಾತ್ಮಕ ವಿಚಾರಗಳ ಗಮನಕೊಡದೆ ಸಕಾರಾತ್ಮಕವಾಗಿಯೇ ಯೋಚಿಸಬೇಕು, ಪ್ರಪಂಚವು ವಿಶಾಲವಾಗಿದೆ ಅವಕಾಶಗಳ ಆಗರವಾದ ಈ ವಿಶಾಲ ಪ್ರಪಂಚದಲ್ಲಿ ದೊಡ್ಡ ಗುರಿಯನ್ನಿಟ್ಟುಕೊಂಡು ಸಾಧನೆಯೆಡೆಗೆ ಅವಿರತವಾಗಿ ಶ್ರಮವಹಿಸಬೇಕು, ಎಲ್ಲಾ ರೀತಿಯ ಸೌಲಭ್ಯಗಳಿರುವ ಈ ಕಾಲದಲ್ಲಿ ನಾವು ಅವಕಾಶಗಳನ್ನು ಸದುಪಯೋಗಪಡಸಿಕೊಂಡು ಯಶಸ್ವೀ ವ್ಯಕ್ತಿಗಳಾಗಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಸುನಿಲ್ ಬೋರ್ಕರ್ ಉಪಸ್ಥಿತರಿದ್ದರು. ಸುಮಾರು 100 ಜನ ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು. ಕುಮಾರಿ ಸಿಂಧು ಪ್ರಭು ಮತ್ತು ಅಮೃತಾಂಬ ಅವರ ವೇದಮಂತ್ರದೊಂದಿಗೆ ಕಾರ್ಯಕ್ರಮ ಮೊದಲ್ಗೊಂಡಿತು. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ  ಬಿಪಿನ್ ಚಂದ್ರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

16 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

23 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago