Advertisement
ಸುದ್ದಿಗಳು

ಧನಾತ್ಮಕ ಚಿಂತನೆಯ ಸೃಜನಶೀಲತೆಯಿಂದ ಅದ್ಭುತ ಸಾಧನೆ – ಡಾ.ಎಂ.ಮೋಹನ ಆಳ್ವ

Share

ಸುಳ್ಯ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕನಸು ಕಾಣಬೇಕು ಮತ್ತು ಅದರ ಸಾಕಾರಕ್ಕೆ ಸೃಜನಶೀಲವಾಗಿ ಪ್ರಯತ್ನ ನಡೆಸಬೇಕು. ಧನಾತ್ಮಕ ಚಿಂತನೆಯ ಸೃಜನಶೀಲತೆಯಿಂದ ಅದ್ಭುತ ಸಾಧನೆಯನ್ನು ಮಾಡಬಹುದು ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದ್ದಾರೆ.

ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯ ಮತ್ತು ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನೆಹರೂ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಬಿ.ಪ್ರಭಾಕರ ಶಿಶಿಲರ ಆತ್ಮಕಥನ `ಬೊಗಸೆ ತುಂಬಾ ಕನಸು’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಾಮಾನ್ಯ ವ್ಯಕ್ತಿಯೊಬ್ಬ ಅಸಾಮಾನ್ಯತೆಯ ಕಡೆಗೆ ನಡೆದ ಅದ್ಭುತ ಕಥೆ ಡಾ.ಪ್ರಭಾಕರ ಶಿಶಿಲ ಅವರದ್ದು. ಅವರ ಈ ಸಾಧನೆ ಬೊಗಸೆ ತುಂಬಾ ಕನಸು ರೂಪದಲ್ಲಿ ಹೊರ ಬಂದಿದೆ ಎಂದು ಅವರು ಹೇಳಿದರು.

ಮಾತನಾಡದ ಭಾಷೆಯೊಳಗೆ ದೇಶದ ಆತ್ಮ ಅಡಗಿದೆ-ಡಾ.ಬಿಳಿಮಲೆ

ಇದುವರೆಗೆ ಮಾತನಾಡದ ಸಣ್ಣ ಭಾಷೆಯೊಳಗೆ ಭಾರತದ ನಿಜವಾದ ಆತ್ಮ ಅಡಗಿದೆ ಎಂದು ಕೃತಿಯ ಬಗ್ಗೆ ಮಾತನಾಡಿದ ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಬಿ.ಪುರುಷೋತ್ತಮ ಬಿಳಿಮಲೆ ಹೇಳಿದರು. ಸಣ್ಣ ಭಾಷೆಯ ಮತ್ತು ಆ ಭಾಷೆಗಳನ್ನು ಮಾತನಾಡುವ ಸಮುದಾಯದ ಅನುಭವಗಳು ದೇಶದ ಸಂಸ್ಕೃತಿಯ ಭಾಗವಾಗಿ ಬರುತ್ತಿಲ್ಲ. ಸಣ್ಣ ಭಾಷೆಗಳ ಮತ್ತು ಸಣ್ಣ ಮನುಷ್ಯರ ಬದುಕು ಹಾಗು ಸಾಧನೆಗಳು ಒಂದೊಂದು ಹೆಜ್ಜೆ ಗುರುತಾಗಿ ದೇಶ ಕಟ್ಟಲು ಮೆಟ್ಟಿಲಾಗಬೇಕು. ನಮ್ಮ ಯೋಚನೆಗಳನ್ನು ಸ್ವಲ್ಪ ಬದಲಾಯಿಸಿದರೆ ಸಣ್ಣ ಜನರ ಆತ್ಮ ಚರಿತ್ರೆಗಳು, ಸಣ್ಣ ಭಾಷೆಗಳಲ್ಲಿ ಅಡಗಿರುವ ಮೌಲ್ಯಗಳು ಮಹತ್ವ ಪಡೆದುಕೊಳ್ಳುತ್ತವೆ ಎಂದು ಅಭಿಪ್ರಾಯಪಟ್ಟರು. ನಮ್ಮ ದೇಶ ಒಂದು ರಂಗೋಲಿಯಂತೆ ಅದು ನೂರಾರು ಬಣ್ಣಗಳನ್ನು ಒಳಗೊಂಡಿದೆ. ಅಂತಹಾ ರಂಗೋಲಿಗೆ ಶಿಶಿಲರು ಒಂದು ಬಣ್ಣ ಸೇರಿಸಿದ್ದಾರೆ ಎಂದರು.

ದೂರದೃಷ್ಠಿಯೇ ಬದುಕಿನ ದೃಷ್ಠಿ- ಡಾ.ಬಿ.ಯಶೋವರ್ಮ
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ `ದೂರದೃಷ್ಠಿ ಇಲ್ಲದಿರುವುದು ದೃಷ್ಠಿ ಹೀನತೆಗಿಂತ ಕಷ್ಟಕರ. ಆದುದರಿಂದ ದೂರದೃಷ್ಠಿಯೇ ಬದುಕಿನ ದೃಷ್ಠಿಯಾಗಿರಬೇಕು ಎಂದು ಹೇಳಿದರು. ಜೀವನದ ಎಲ್ಲಾ ಕಷ್ಟಗಳನ್ನೂ ಎದುರಿಸಿ ಈ ಹಂತಕ್ಕೆ ಬೆಳೆದ ಡಾ.ಶಿಶಿಲರ ಆತ್ಮಕಥೆ ಬದುಕಿಗೆ ದೊಡ್ಡ ಭರವಸೆ ಮತ್ತು ಸಮಾಜಕ್ಕೆ ದೊಡ್ಡ ಕೊಡುಗೆ ಎಂದು ಬಣ್ಣಿಸಿದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ. ಅತಿಥಿಗಳಾಗಿದ್ದರು. ನೆಹರೂ ಸ್ಮಾರಕ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಸಂಘದ ಮಾರ್ಗದರ್ಶಕಿ ಪ್ರೊ.ರತ್ನಾವತಿ ಕೇರ್ಪಳ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಪೂವಪ್ಪ ಕಣಿಯೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಕಾಲೇಜಿನ ವಿದ್ಯಾರ್ಥಿ ನಾಯಕ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ ಸ್ವಾಗತಿಸಿದರು. ಡಾ.ಪ್ರಭಾಕರ ಶಿಶಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ದಿನೇಶ್ ಮಡಪ್ಪಾಡಿ ವಂದಿಸಿದರು. ಅಚ್ಚುತ ಅಟ್ಲೂರು, ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು. ಡಾ.ಪ್ರಭಾಕರ ಶಿಶಿಲ ದಂಪತಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago