ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

May 24, 2019
3:08 PM

ಧರ್ಮಸ್ಥಳ :ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ  ಸ್ವಚ್ಛತಾ ಅಭಿಯಾನ ಶುಕ್ರವಾರ ಬೆಳಗ್ಗೆ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯತ್ , ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು  ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು.ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ ಸಾಗಿಸಲಾಯಿತು.

 

 

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸ್ವಚ್ಛತೆ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಪರಿಕಲ್ಪನೆ ಪರಿಣಾಮಕಾರಿಯಾಗಿದ್ದು ದೇಶದಲ್ಲಿ ಶೇ. 50 ರಷ್ಟು ಯಶಸ್ವಿಯಾಗಿದೆ. ಪ್ರತಿ ಮನೆಯಲ್ಲಿಯೂ ಈ ಭಾವನೆ ಮೂಡಿ ಬರಬೇಕು ಎಂದು ಅವರು ಹಾರೈಸಿದರು.ಊರಿನವರು ಮತ್ತು ಧರ್ಮಸ್ಥಳದ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿರುವುದು ಸಂತೋಷವಾಗಿದೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror