ಧರ್ಮಸ್ಥಳ: ಸೇವಕರ ತಂಡ “ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ” ವತಿಯಿಂದ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾ ಕಾರ್ಯವನ್ನು ಮಾಡಿದರು. ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತೆ ನಡೆಸಿ 6 ಲೋಡ್ ಬಟ್ಟೆ ತ್ಯಾಜ್ಯ, 2 ಲೋಡ್ ಕಟ್ಟಿಗೆ ಹಾಗೂ 8 ಲೋಡ್ ತ್ಯಾಜ್ಯ ತೆರವುಗೊಳಿಸಲಾಯಿತು.
ಉಜಿರೆಯಲ್ಲಿ ಕಳೆದ ಜ.21 ರಂದು ಉಜಿರೆ ಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡ ಈ ಸ್ವಚ್ಛತಾ ತಂಡದಲ್ಲಿ 600 ಮಂದಿ ಇದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆಪೀಡಿತರಿಗೆ ಸಂಕಷ್ಟದ ಸಂದರ್ಭ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರತಂಡವನ್ನು ರಚಿಸಿದೆ. ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾಕಾರ್ಯವನ್ನು 500 ಮಂದಿ ಸ್ವಯಂ ಸೇವಕರತಂಡದವರು ಪ್ರಥಮ ಸೇವೆಯಾಗಿ ಮಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ ಭೇಟಿ ನೀಡಿ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಜಿರೆಯ ಹಿರಿಯ ಸಮಾಜ ಸೇವಾಕರ್ತರಾಮಚಂದ್ರ ಶೆಟ್ಟಿ ಸ್ವಚ್ಛತಾಕಾರ್ಯ ಉದ್ಘಾಟಿಸಿದರು. ಶರತ್ಕೃಷ್ಣ ಪಡ್ವೆಟ್ನಾಯ, ಅನ್ನಪೂರ್ಣಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ಉಜಿರೆಯ ಉದ್ಯಮಿರಾಜೇಶ್ ಪೈ ಹಾಗೂ ಮೋಹನ ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸೇವೆ ನಡೆಯಿತು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…