Advertisement
MIRROR FOCUS

ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯ

Share

ಧರ್ಮಸ್ಥಳ:  ಸೇವಕರ ತಂಡ “ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ” ವತಿಯಿಂದ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾ ಕಾರ್ಯವನ್ನು  ಮಾಡಿದರು. ಬೆಳಿಗ್ಗೆಯಿಂದ  ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತೆ ನಡೆಸಿ 6 ಲೋಡ್ ಬಟ್ಟೆ ತ್ಯಾಜ್ಯ, 2 ಲೋಡ್‍ ಕಟ್ಟಿಗೆ ಹಾಗೂ 8 ಲೋಡ್‍ ತ್ಯಾಜ್ಯ ತೆರವುಗೊಳಿಸಲಾಯಿತು.

Advertisement
Advertisement

Advertisement

ಉಜಿರೆಯಲ್ಲಿ ಕಳೆದ ಜ.21 ರಂದು ಉಜಿರೆ ಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡ ಈ ಸ್ವಚ್ಛತಾ ತಂಡದಲ್ಲಿ 600 ಮಂದಿ ಇದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆಪೀಡಿತರಿಗೆ ಸಂಕಷ್ಟದ ಸಂದರ್ಭ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರತಂಡವನ್ನು ರಚಿಸಿದೆ. ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾಕಾರ್ಯವನ್ನು 500 ಮಂದಿ ಸ್ವಯಂ ಸೇವಕರತಂಡದವರು ಪ್ರಥಮ ಸೇವೆಯಾಗಿ ಮಾಡಿದರು.

Advertisement

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ ಭೇಟಿ ನೀಡಿ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಉಜಿರೆಯ ಹಿರಿಯ ಸಮಾಜ ಸೇವಾಕರ್ತರಾಮಚಂದ್ರ ಶೆಟ್ಟಿ ಸ್ವಚ್ಛತಾಕಾರ್ಯ ಉದ್ಘಾಟಿಸಿದರು. ಶರತ್‍ಕೃಷ್ಣ ಪಡ್ವೆಟ್ನಾಯ, ಅನ್ನಪೂರ್ಣಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ಉಜಿರೆಯ ಉದ್ಯಮಿರಾಜೇಶ್ ಪೈ ಹಾಗೂ ಮೋಹನ ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸೇವೆ ನಡೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

27 mins ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

48 mins ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

1 hour ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

3 hours ago