ಧರ್ಮಸ್ಥಳ: ಸೇವಕರ ತಂಡ “ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ” ವತಿಯಿಂದ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾ ಕಾರ್ಯವನ್ನು ಮಾಡಿದರು. ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತೆ ನಡೆಸಿ 6 ಲೋಡ್ ಬಟ್ಟೆ ತ್ಯಾಜ್ಯ, 2 ಲೋಡ್ ಕಟ್ಟಿಗೆ ಹಾಗೂ 8 ಲೋಡ್ ತ್ಯಾಜ್ಯ ತೆರವುಗೊಳಿಸಲಾಯಿತು.
ಉಜಿರೆಯಲ್ಲಿ ಕಳೆದ ಜ.21 ರಂದು ಉಜಿರೆ ಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡ ಈ ಸ್ವಚ್ಛತಾ ತಂಡದಲ್ಲಿ 600 ಮಂದಿ ಇದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆಪೀಡಿತರಿಗೆ ಸಂಕಷ್ಟದ ಸಂದರ್ಭ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರತಂಡವನ್ನು ರಚಿಸಿದೆ. ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾಕಾರ್ಯವನ್ನು 500 ಮಂದಿ ಸ್ವಯಂ ಸೇವಕರತಂಡದವರು ಪ್ರಥಮ ಸೇವೆಯಾಗಿ ಮಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ ಭೇಟಿ ನೀಡಿ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಜಿರೆಯ ಹಿರಿಯ ಸಮಾಜ ಸೇವಾಕರ್ತರಾಮಚಂದ್ರ ಶೆಟ್ಟಿ ಸ್ವಚ್ಛತಾಕಾರ್ಯ ಉದ್ಘಾಟಿಸಿದರು. ಶರತ್ಕೃಷ್ಣ ಪಡ್ವೆಟ್ನಾಯ, ಅನ್ನಪೂರ್ಣಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ಉಜಿರೆಯ ಉದ್ಯಮಿರಾಜೇಶ್ ಪೈ ಹಾಗೂ ಮೋಹನ ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸೇವೆ ನಡೆಯಿತು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…