ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವವು ಸಂಪನ್ನಗೊಂಡಿತು.
ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಸಕ್ತ ಸಾಲಿನ ತಿರುಗಾಟ ಕೊನೆಗೊಂಡು ಮೇ 25 ರಂದು ಸಂಜೆ ಮೇಳದ ಶ್ರೀ ಮಹಾಗಣಪತಿಯನ್ನು ಶ್ರೀ ಮಂಜುಕೃಪದಿಂದ ವೈಭವದ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಕೇರಳದ ಚೆಂಡೆಮೇಳ, ವಾದ್ಯ, ಶಂಖ. ಜಾಗಟೆ, ಕ್ಷೇತ್ರದ ಬಿರುದಾವಳಿಗಳು ಆನೆಗಳು, ಬಸವ, ಹೂವಿನ ಕೋಲು, ಮೆರವಣಿಗೆಯ ಶೋಭೆ ಹೆಚ್ಚಿಸಿತ್ತು. ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಹಾಗಣಪತಿ ಉತ್ಸವ ಸಾಗಿ ಛತ್ರ ಮಹಾಗಣಪತಿ ಸನ್ನಿಧಿಗೆ ಪ್ರವೇಶಿಸಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್ ಮತ್ತು ಕ್ಷೇತ್ರದ ಸಿಬ್ಬಂದಿ ವರ್ಗ ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.
ರಾತ್ರಿ ಕ್ಷೇತ್ರದಲ್ಲಿ ವಿಶೇಷ ಉತ್ಸವದೊಂದಿಗೆ ವಾರ್ಷಿಕ ಉತ್ಸವ ವಿಶೇಷ ಸೇವೆಗಳು ಸಮಾಪನಗೊಂಡವು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…