ಧರ್ಮಸ್ಥಳದಲ್ಲಿ ಪಿಲಿ ನಲಿಕೆ ವೈಭವ : ಹುಲಿಗಳು ಸಾರ್, ಹುಲಿಗಳು…….!!

October 2, 2019
10:30 AM

ಧರ್ಮಸ್ಥಳ:  ಅರಣ್ಯ ನಾಶ ಹಾಗೂ ಕಾಡಿನಲ್ಲಿ ಆಹಾರದ ಕೊರತೆಯಿಂದ ಅನಿವಾರ್ಯವಾಗಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಹಾಗೂ ಅರಣ್ಯ ನಾಶದಿಂದ ಕಾಡು ಪ್ರಾಣಿಗಳಿಗೆ ಆಹಾರದ ಕೊರತೆಯಾಗುತ್ತಿದೆ. ಅರಣ್ಯ ಸಂರಕ್ಷಣೆಯೊಂದಿಗೆ ಕಾಡು ಪ್ರಾಣಿಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Advertisement
Advertisement

ಅವರು ಮಂಗಳವಾರ ಧರ್ಮಸ್ಥಳದಲ್ಲಿ ನೂರು ಹುಲಿಗಳ ಪಿಲಿ ನಲಿಕೆ ವೈಭವ ಹಾಗೂ ಕಾಡು ಪ್ರಾಣಿಗಳ ನೃತ್ಯವನ್ನು ವೀಕ್ಷಿಸಿ ಸಂತಸದಿಂದ ಅವುಗಳನ್ನು ಹರಸಿ ಮಾತನಾಡಿದರು.
ನೀವು ಬದುಕಿ, ನಮ್ಮನ್ನೂ ಬದುಕಲು ಬಿಡಿ ಎಂದು ಎಲ್ಲಾ ಕಾಡು ಪ್ರಾಣಿಗಳು ಹೆಗ್ಗಡೆಯವರಿಗೆ ಮೌಖಿಕ ಮನವಿ ಅರ್ಪಿಸಿದವು. ಹೆಗ್ಗಡೆಯವರು ಸಂತೋಷದಿಂದ ಎಲ್ಲಾ ಪ್ರಾಣಿಗಳಿಗೂ ಶುಭ ಹಾರೈಸಿದರು.

ಪಿಲಿ ನಲಿಕೆ ಸಂಯೋಜಕ ಹಾಗೂ ಸ್ವತಃ ಹುಲಿ ವೇಷಧಾರಿಯಾಗಿ ಖ್ಯಾತರಾದ ಮಂಗಳೂರಿನ ಮಿಥುನ್ ರೈ ಅವರ ಕಾಳಜಿಯನ್ನು ಹೆಗ್ಗಡೆಯವರು ಶ್ಲಾಘಿಸಿ ಅಭಿನಂದಿಸಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ ವನ್ಯಜೀವಿಗಳ ಸಂರಕ್ಷಣೆಯಲ್ಲಿ ವಿಶೇಷವಾಗಿ ಯುವಜನತೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ ಕಾಡು ಪ್ರಾಣಿಗಳ ರಕ್ಷಣೆಗೆ ವಿಶೇಷ ಆದ್ಯತೆ ನೀಡುವುದಾಗಿ ಅವರು ಭರವಸೆ ನೀಡಿದರು.

ಪಿಲಿನಲಿಕೆ ಸಂಯೋಜಕ ಮಿಥುನ್ ರೈ ಶುಭಾಶಂಸನೆ ಮಾಡಿದರು. ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಲಲಿತಕಲಾ ಕೇಂದ್ರದ ವಿದ್ಯಾರ್ಥಿಗಳು ಪ್ರದರ್ಶಿಸಿದ ಕಾಡು ಪ್ರಾಣಿಗಳ ನೃತ್ಯ ಸಂಯೋಜನೆ ಪ್ರೇಕ್ಷಕರ ವಿಶೇಷ ಮೆಚ್ಚುಗೆ ಹಾಗೂ ಅಭಿನಂದನೆಗೆ ಪಾತ್ರವಾಯಿತು. ನವದುರ್ಗೆಯರು ಧರೆಗಿಳಿದು, ಮಹಿಷಾಸುರ ಮರ್ದನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಹೇಮಾವತಿ ವಿ, ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾವರ್ಮ, ಡಿ. ಶ್ರೇಯಸ್ ಕುಮಾರ್, ಕು. ಮಾನ್ಯ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror