ಧರ್ಮಸ್ಥಳ: ಅರಣ್ಯ ನಾಶ ಹಾಗೂ ಕಾಡಿನಲ್ಲಿ ಆಹಾರದ ಕೊರತೆಯಿಂದ ಅನಿವಾರ್ಯವಾಗಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಹಾಗೂ ಅರಣ್ಯ ನಾಶದಿಂದ ಕಾಡು ಪ್ರಾಣಿಗಳಿಗೆ ಆಹಾರದ ಕೊರತೆಯಾಗುತ್ತಿದೆ. ಅರಣ್ಯ ಸಂರಕ್ಷಣೆಯೊಂದಿಗೆ ಕಾಡು ಪ್ರಾಣಿಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ನೂರು ಹುಲಿಗಳ ಪಿಲಿ ನಲಿಕೆ ವೈಭವ ಹಾಗೂ ಕಾಡು ಪ್ರಾಣಿಗಳ ನೃತ್ಯವನ್ನು ವೀಕ್ಷಿಸಿ ಸಂತಸದಿಂದ ಅವುಗಳನ್ನು ಹರಸಿ ಮಾತನಾಡಿದರು.
ನೀವು ಬದುಕಿ, ನಮ್ಮನ್ನೂ ಬದುಕಲು ಬಿಡಿ ಎಂದು ಎಲ್ಲಾ ಕಾಡು ಪ್ರಾಣಿಗಳು ಹೆಗ್ಗಡೆಯವರಿಗೆ ಮೌಖಿಕ ಮನವಿ ಅರ್ಪಿಸಿದವು. ಹೆಗ್ಗಡೆಯವರು ಸಂತೋಷದಿಂದ ಎಲ್ಲಾ ಪ್ರಾಣಿಗಳಿಗೂ ಶುಭ ಹಾರೈಸಿದರು.
ಪಿಲಿ ನಲಿಕೆ ಸಂಯೋಜಕ ಹಾಗೂ ಸ್ವತಃ ಹುಲಿ ವೇಷಧಾರಿಯಾಗಿ ಖ್ಯಾತರಾದ ಮಂಗಳೂರಿನ ಮಿಥುನ್ ರೈ ಅವರ ಕಾಳಜಿಯನ್ನು ಹೆಗ್ಗಡೆಯವರು ಶ್ಲಾಘಿಸಿ ಅಭಿನಂದಿಸಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ ವನ್ಯಜೀವಿಗಳ ಸಂರಕ್ಷಣೆಯಲ್ಲಿ ವಿಶೇಷವಾಗಿ ಯುವಜನತೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ ಕಾಡು ಪ್ರಾಣಿಗಳ ರಕ್ಷಣೆಗೆ ವಿಶೇಷ ಆದ್ಯತೆ ನೀಡುವುದಾಗಿ ಅವರು ಭರವಸೆ ನೀಡಿದರು.
ಪಿಲಿನಲಿಕೆ ಸಂಯೋಜಕ ಮಿಥುನ್ ರೈ ಶುಭಾಶಂಸನೆ ಮಾಡಿದರು. ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಲಲಿತಕಲಾ ಕೇಂದ್ರದ ವಿದ್ಯಾರ್ಥಿಗಳು ಪ್ರದರ್ಶಿಸಿದ ಕಾಡು ಪ್ರಾಣಿಗಳ ನೃತ್ಯ ಸಂಯೋಜನೆ ಪ್ರೇಕ್ಷಕರ ವಿಶೇಷ ಮೆಚ್ಚುಗೆ ಹಾಗೂ ಅಭಿನಂದನೆಗೆ ಪಾತ್ರವಾಯಿತು. ನವದುರ್ಗೆಯರು ಧರೆಗಿಳಿದು, ಮಹಿಷಾಸುರ ಮರ್ದನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಹೇಮಾವತಿ ವಿ, ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾವರ್ಮ, ಡಿ. ಶ್ರೇಯಸ್ ಕುಮಾರ್, ಕು. ಮಾನ್ಯ ಉಪಸ್ಥಿತರಿದ್ದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…