ಧರ್ಮಸ್ಥಳ: ವಾಚನ-ಪ್ರವಚನ ಕಾರ್ಯಕ್ರಮದಲ್ಲಿ ಪುರಾಣ ಗ್ರಂಥಗಳಿಂದ ವೈವಿಧ್ಯಮಯ ಅಮೂಲ್ಯ ವಿಚಾರಗಳನ್ನು ಅಳವಡಿಸಿದ್ದು ವಾಚನ-ಪ್ರವಚನ ಮಾಡಿದವರಿಗೂ, ಶ್ರೋತೃಗಳಿಗೂ ತುಂಬಾ ಪ್ರಯೋಜನವಾಗಿದೆ. ಧರ್ಮ ಪ್ರಭಾವನೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 64 ದಿನಗಳಲ್ಲಿ ಪ್ರತಿ ದಿನ ಸಂಜೆ ಗಂಟೆ 6.30ರಿಂದ 8.00 ಗಂಟೆ ವರೆಗೆ ವಾಚನ-ಪ್ರವಚನ ಮಾಡಿದ ವಿದ್ವಾಂಸರನ್ನುಅವರು ಗೌರವಿಸಿ ಮಾತನಾಡಿದರು. ಸಾರ್ವಜನಿಕ ಧಾರ್ಮಿಕ ಸಮಾರಂಭಗಳಲ್ಲಿ ಕನಿಷ್ಠ ಒಂದು ಗಂಟೆ ಅವಧಿಯ ವಾಚನ-ಪ್ರವಚನ ಕಾರ್ಯಕ್ರಮ ಅಳವಡಿಸಬೇಕು ಎಂದು ಅವರು ಸಲಹೆ ನೀಡಿದರು. ಹರಿಕಥೆ, ಶಾಸ್ತ್ರೀಯ ಸಂಗೀತ, ಯಕ್ಷಗಾನ ಮೊದಲಾದಆಧ್ಯಾತ್ಮಿಕ ಪ್ರಭಾವನಾ ಕಾರ್ಯಕ್ರಮಗಳು ಕಡಿಮೆಯಾಗುತ್ತಿರುವ ಬಗ್ಯೆಅವರು ಕಳವಳ ವ್ಯಕ್ತಪಡಿಸಿದರು.ಹೇಮಾವತಿ ವೀ, ಹೆಗ್ಗಡೆಯವರು ಉಪಸ್ಥಿತರಿದ್ದರು.
ಶ್ರೀನಿವಾಸ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…