ಧರ್ಮಸ್ಥಳ: ವಾಚನ-ಪ್ರವಚನ ಕಾರ್ಯಕ್ರಮದಲ್ಲಿ ಪುರಾಣ ಗ್ರಂಥಗಳಿಂದ ವೈವಿಧ್ಯಮಯ ಅಮೂಲ್ಯ ವಿಚಾರಗಳನ್ನು ಅಳವಡಿಸಿದ್ದು ವಾಚನ-ಪ್ರವಚನ ಮಾಡಿದವರಿಗೂ, ಶ್ರೋತೃಗಳಿಗೂ ತುಂಬಾ ಪ್ರಯೋಜನವಾಗಿದೆ. ಧರ್ಮ ಪ್ರಭಾವನೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 64 ದಿನಗಳಲ್ಲಿ ಪ್ರತಿ ದಿನ ಸಂಜೆ ಗಂಟೆ 6.30ರಿಂದ 8.00 ಗಂಟೆ ವರೆಗೆ ವಾಚನ-ಪ್ರವಚನ ಮಾಡಿದ ವಿದ್ವಾಂಸರನ್ನುಅವರು ಗೌರವಿಸಿ ಮಾತನಾಡಿದರು. ಸಾರ್ವಜನಿಕ ಧಾರ್ಮಿಕ ಸಮಾರಂಭಗಳಲ್ಲಿ ಕನಿಷ್ಠ ಒಂದು ಗಂಟೆ ಅವಧಿಯ ವಾಚನ-ಪ್ರವಚನ ಕಾರ್ಯಕ್ರಮ ಅಳವಡಿಸಬೇಕು ಎಂದು ಅವರು ಸಲಹೆ ನೀಡಿದರು. ಹರಿಕಥೆ, ಶಾಸ್ತ್ರೀಯ ಸಂಗೀತ, ಯಕ್ಷಗಾನ ಮೊದಲಾದಆಧ್ಯಾತ್ಮಿಕ ಪ್ರಭಾವನಾ ಕಾರ್ಯಕ್ರಮಗಳು ಕಡಿಮೆಯಾಗುತ್ತಿರುವ ಬಗ್ಯೆಅವರು ಕಳವಳ ವ್ಯಕ್ತಪಡಿಸಿದರು.ಹೇಮಾವತಿ ವೀ, ಹೆಗ್ಗಡೆಯವರು ಉಪಸ್ಥಿತರಿದ್ದರು.
ಶ್ರೀನಿವಾಸ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…