Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ ಭಜನಾ ತರಬೇತಿ ಶಿಬಿರ: ಸಮಾರೋಪ ಸಮಾರಂಭ

Share

ಧರ್ಮಸ್ಥಳ: ಬದುಕು ಸುಖ-ದುಃಖಗಳ ಮಿಶ್ರಣವಾಗಿದ್ದು ನಿರಂತರ ಹೋರಾಟಮಯವಾಗಿರುತ್ತದೆ. ಮಾನವಜನ್ಮ ಅಮೂಲ್ಯವಾಗಿದ್ದು ನಿತ್ಯವೂ ಶ್ರದ್ಧಾ-ಭಕ್ತಿಯಿಂದ, ಪರಿಶುದ್ಧ ಮನಸ್ಸಿನಿಂದ ಭಜನೆ ಮಾಡಿದಾಗ ನಮ್ಮಲ್ಲಿರುವ ಸಕಲ ದೋಷಗಳ ನಿವಾರಣೆಯಾಗಿ ಅಂತರಂಗದಲ್ಲಿ ದೈವತ್ವ ಹಾಗೂ ಉತ್ತಮ ಸಂಸ್ಕಾರ ಜಾಗೃತವಾಗುತ್ತದೆ. ತನ್ಮೂಲಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹರಿಹರಪುರದ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಒಂದು ವಾರ ನಡೆದ ಇಪ್ಪತ್ತೊಂದನೆ ವರ್ಷದ ಭಜನಾ ತರಬೇತಿ ಶಿಬಿರ ಮತ್ತು ಸಂಸ್ಕೃತಿ ಸಂವರ್ಧನಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ತನ್ನಂತೆ ಪರರ ಬಗೆದು ಬದುಕುವುದೇ ಮಾನವತ್ವವಾಗಿದೆ. ಸಂಸ್ಕಾರದ ಸಮಷ್ಟಿ ರೂಪವೇ ಸಂಸ್ಕೃತಿ ಆಗಿದೆ. ಇಡೀ ವಿಶ್ವವೇ ಒಂದು ಕುಟುಂಬ ಎಂಬ ಭಾವನೆಯೊಂದಿಗೆ ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸೌಹಾರ್ದಯುತ ಜೀವನ ನಡೆಸಲು ಸಂಸ್ಕಾರ ಪ್ರೇರಣೆ ನೀಡುತ್ತದೆ ಎಂದು ಸ್ವಾಮೀಜಿ ಅಭಿಪ್ರಾಯ ಪಟ್ಟರು.

ಹಿರೇಮಗಳೂರು ಕಣ್ಣನ್ ಶುಭಾಶಂಸನೆ ಮಾಡಿ, ಭಜನೆಯಿಂದ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ .ಗೂಗಲ್ ಮುಂದೆ ಗೂಬೆಗಳಾಗುವ ಬದಲು ಭಜನಾ ಸಂಸ್ಕೃತಿ ಮೂಲಕ ಸಾರ್ಥಕ ಜೀವನ ನಡೆಸಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಭಜನಾ ಪರಿಷತ್ ಮೂಲಕ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು. ಭಜನಾ ತರಬೇತಿ ಪಡೆದವರು ಆಯಾಗ್ರಾಮದಲ್ಲಿ ಸಾಂಸ್ಕೃತಿಕ ರಾಯಭಾರಿಗಳಾಗಿ ಸಮಾಜದ ಸಂಘಟನೆಗೆ ಪ್ರಯತ್ನಿಸಬೇಕು. ವ್ಯವಹಾರದಲ್ಲಿ ಸದಾ ಧಾರ್ಮಿಕ ಪ್ರಜ್ಞೆ ಇರಬೇಕು. ಜನರ ಸುಖ-ಕಷ್ಟಕ್ಕೆ ಸಮನಾಗಿ ಸ್ಪಂದಿಸಬೇಕು. ಸಂಸಾರದಲ್ಲಿ ಹಾಗೂ ಸಮಾಜದ ಸಮಸ್ಯೆಗಳನ್ನು ಸೌಹಾರ್ಧಯುತವಾಗಿ ಪರಿಹರಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಶಾಸಕ ಹರೀಶ್ ಪೂಂಜ, ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.
ಭಜನಾ ತರಬೇತಿ ಶಿಬಿರದ ಕಾರ್ಯದರ್ಶಿ ಮಮತಾರಾವ್ ವರದಿ ಸಾದರ ಪಡಿಸಿದರು. ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಬಿ. ಜಯರಾಮ ನೆಲ್ಲಿತ್ತಾಯ ಧನ್ಯವಾದವಿತ್ತರು.ಶ್ರೀನಿವಾಸ ರಾವ್‍ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

3 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

3 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

3 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

4 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

4 hours ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

13 hours ago