ಧರ್ಮಸ್ಥಳ : ನೂರೈವತ್ತು ವರ್ಷಗಳ ಇತಿಹಾಸ ಹೊಂದಿರುವ ಮುಂಬೈನ ಆಯುರ್ವೇದ ಸಂಸ್ಥೆಯಾದ ಶ್ರೀ ಧೂತಪಾಪೇಶ್ವರ್ ಲಿಮಿಟೆಡ್ ತಯಾರಿಸಿದ “ಮಹಾ ಸ್ವರ್ಣಯೋಗ” ಔಷಧಿಯನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಬಳಿಕ ಮಾತನಾಡಿದ ಅವರು, ಆರೋಗ್ಯ ಭಾಗ್ಯ ರಕ್ಷಣೆಗೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಹಾಸ್ವರ್ಣ ಯೋಗ ಸಹಕಾರಿಯಾಗಿದೆ ಎಂದು ಅವರು ಹೇಳಿ ಶುಭ ಹಾರೈಸಿದರು.
ಆಯುರ್ವೇದ ಸಂಸ್ಥೆಯ ಆಡಳಿತ ನಿರ್ದೇಶಕ ರಂಜಿತ್ ಪುರಾಣಿಕ್ ಮಾತನಾಡಿ, ಮಹಾ ಸ್ವರ್ಣ ಯೋಗ ಕೇವಲ ಔಷಧಿ ಮಾತ್ರವಲ್ಲ. ಪರಿಪೂರ್ಣ ಚಿಕಿತ್ಸಾ ವಿಧಾನವಾಗಿದೆ. ಸಣ್ಣ ಶಿಶುಗಳಿಂದ 16 ವರ್ಷ ಪ್ರಾಯದ ಮಕ್ಕಳಿಗೆ ಈ ಔಷಧಿ ನೀಡಬಹುದು ತಮ್ಮ ಸಂಸ್ಥೆಯು ಪ್ರಮಾಣೀಕೃತ, ಸುರಕ್ಷಿತ, ಹಾಗೂ ಪರಿಣಾಮಕಾರಿ ಔಷಧಿಗಳನ್ನು ತಯಾರಿಸುವಲ್ಲಿ ಬದ್ಧವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಮಾರಾಟ ನಿರ್ವಾಹಕ ಕೆ. ಎ. ನಾಯಕ್ ಮಾತನಾಡಿದರು. ಹಾಸನದ ಕಾಲೇಜಿನ ಡಾ. ಶೈಲಜ ಶುಭಾಶಂಸನೆ ಮಾಡಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…