ಧರ್ಮಸ್ಥಳ :ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಆಯೋಜಿಸಲಾದ 17 ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಿಸಿ ಮಾತನಾಡಿದ ಚಿತ್ರಕಲಾವಿದ ಮುಖ್ಯಮಂತ್ರಿಚಂದ್ರು, ಕಲೆಗೆ ಜಾತಿ-ಮತ, ಬಡವ-ಬಲ್ಲಿದನೆಂಬ ಬೇಧವಿಲ್ಲ. ಕಲೆಯಿಂದ ಮನಸ್ಸಿಗೆ ಸಂತಾಸದಾಯಕವಾಗುವುದರ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ. ಸರ್ವರಿಗೂ ಸಮಪಾಲು, ಸಮಬಾಳು ತತ್ವದ ನೆಲೆಯಲ್ಲಿ ಧರ್ಮಸ್ಥಳದಲ್ಲಿ ಹೆಗ್ಗಡೆಯವರು ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು.
ಶುಭಾಶಂಸನೆ ಮಾಡಿದ ಗಂಜಿಫಾ ರಘುಪತಿ ಭಟ್, ಧರ್ಮಸ್ಥಳವು ನಮ್ಮಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಪಾವನ ಕ್ಷೇತ್ರವಾಗಿದೆಎಂದು ಹೇಳಿದರು.ವಿದೇಶೀ ಶೈಲಿಯ ಕಲೆಗಳ ವ್ಯಾಮೋಹದಿಂದ ದೇಶೀಯ ಚಿತ್ರಕಲೆ ವಿನಾಶದಂಚಿನಲ್ಲಿದೆಎಂದುಅವರು ವಿಷಾದ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಕಲೆಗೆ ಅದ್ಭುತ ಶಕ್ತಿ ಇದ್ದುಕಲೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಹಾಗೂ ತೃಪ್ತಿ ಸಿಗುತ್ತದೆ.ಸೃಜನಾತ್ಮಕ ಕಲೆ ಹಾಗೂ ವಾಸ್ತವಿಕ ಕಲೆಯಿಂದ ನಮ್ಮಲ್ಲಿ ಸಜ್ಜನಿಕೆ ಮತ್ತುಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದರು.
ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರಕುಮಾರ್ ಶಾಂತಿವನಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು.
ಯೋಗ ನಿರ್ದೇಶಕ ಶಶಿಕಾಂತ್ ಜೈನ್ ಸ್ವಾಗತಿಸಿದರು.ಮೂಡಬಿದ್ರೆ ಪ್ರಾಂತ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ ಬಾಲಕೃಷ್ಣ ಧನ್ಯವಾದವಿತ್ತರು.ಬಂಟ್ವಾಳದ ಸದಾಶಿವ ನಾಯಕ್ಕಾರ್ಯಕ್ರಮ ನಿರ್ವಹಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…