ಧರ್ಮಸ್ಥಳ :ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಆಯೋಜಿಸಲಾದ 17 ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಿಸಿ ಮಾತನಾಡಿದ ಚಿತ್ರಕಲಾವಿದ ಮುಖ್ಯಮಂತ್ರಿಚಂದ್ರು, ಕಲೆಗೆ ಜಾತಿ-ಮತ, ಬಡವ-ಬಲ್ಲಿದನೆಂಬ ಬೇಧವಿಲ್ಲ. ಕಲೆಯಿಂದ ಮನಸ್ಸಿಗೆ ಸಂತಾಸದಾಯಕವಾಗುವುದರ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ. ಸರ್ವರಿಗೂ ಸಮಪಾಲು, ಸಮಬಾಳು ತತ್ವದ ನೆಲೆಯಲ್ಲಿ ಧರ್ಮಸ್ಥಳದಲ್ಲಿ ಹೆಗ್ಗಡೆಯವರು ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು.
ಶುಭಾಶಂಸನೆ ಮಾಡಿದ ಗಂಜಿಫಾ ರಘುಪತಿ ಭಟ್, ಧರ್ಮಸ್ಥಳವು ನಮ್ಮಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಪಾವನ ಕ್ಷೇತ್ರವಾಗಿದೆಎಂದು ಹೇಳಿದರು.ವಿದೇಶೀ ಶೈಲಿಯ ಕಲೆಗಳ ವ್ಯಾಮೋಹದಿಂದ ದೇಶೀಯ ಚಿತ್ರಕಲೆ ವಿನಾಶದಂಚಿನಲ್ಲಿದೆಎಂದುಅವರು ವಿಷಾದ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಕಲೆಗೆ ಅದ್ಭುತ ಶಕ್ತಿ ಇದ್ದುಕಲೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಹಾಗೂ ತೃಪ್ತಿ ಸಿಗುತ್ತದೆ.ಸೃಜನಾತ್ಮಕ ಕಲೆ ಹಾಗೂ ವಾಸ್ತವಿಕ ಕಲೆಯಿಂದ ನಮ್ಮಲ್ಲಿ ಸಜ್ಜನಿಕೆ ಮತ್ತುಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದರು.
ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರಕುಮಾರ್ ಶಾಂತಿವನಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು.
ಯೋಗ ನಿರ್ದೇಶಕ ಶಶಿಕಾಂತ್ ಜೈನ್ ಸ್ವಾಗತಿಸಿದರು.ಮೂಡಬಿದ್ರೆ ಪ್ರಾಂತ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ ಬಾಲಕೃಷ್ಣ ಧನ್ಯವಾದವಿತ್ತರು.ಬಂಟ್ವಾಳದ ಸದಾಶಿವ ನಾಯಕ್ಕಾರ್ಯಕ್ರಮ ನಿರ್ವಹಿಸಿದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…