ಧರ್ಮಸ್ಥಳ :ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಆಯೋಜಿಸಲಾದ 17 ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಿಸಿ ಮಾತನಾಡಿದ ಚಿತ್ರಕಲಾವಿದ ಮುಖ್ಯಮಂತ್ರಿಚಂದ್ರು, ಕಲೆಗೆ ಜಾತಿ-ಮತ, ಬಡವ-ಬಲ್ಲಿದನೆಂಬ ಬೇಧವಿಲ್ಲ. ಕಲೆಯಿಂದ ಮನಸ್ಸಿಗೆ ಸಂತಾಸದಾಯಕವಾಗುವುದರ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ. ಸರ್ವರಿಗೂ ಸಮಪಾಲು, ಸಮಬಾಳು ತತ್ವದ ನೆಲೆಯಲ್ಲಿ ಧರ್ಮಸ್ಥಳದಲ್ಲಿ ಹೆಗ್ಗಡೆಯವರು ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು.
ಶುಭಾಶಂಸನೆ ಮಾಡಿದ ಗಂಜಿಫಾ ರಘುಪತಿ ಭಟ್, ಧರ್ಮಸ್ಥಳವು ನಮ್ಮಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಪಾವನ ಕ್ಷೇತ್ರವಾಗಿದೆಎಂದು ಹೇಳಿದರು.ವಿದೇಶೀ ಶೈಲಿಯ ಕಲೆಗಳ ವ್ಯಾಮೋಹದಿಂದ ದೇಶೀಯ ಚಿತ್ರಕಲೆ ವಿನಾಶದಂಚಿನಲ್ಲಿದೆಎಂದುಅವರು ವಿಷಾದ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಕಲೆಗೆ ಅದ್ಭುತ ಶಕ್ತಿ ಇದ್ದುಕಲೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಹಾಗೂ ತೃಪ್ತಿ ಸಿಗುತ್ತದೆ.ಸೃಜನಾತ್ಮಕ ಕಲೆ ಹಾಗೂ ವಾಸ್ತವಿಕ ಕಲೆಯಿಂದ ನಮ್ಮಲ್ಲಿ ಸಜ್ಜನಿಕೆ ಮತ್ತುಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದರು.
ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರಕುಮಾರ್ ಶಾಂತಿವನಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು.
ಯೋಗ ನಿರ್ದೇಶಕ ಶಶಿಕಾಂತ್ ಜೈನ್ ಸ್ವಾಗತಿಸಿದರು.ಮೂಡಬಿದ್ರೆ ಪ್ರಾಂತ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ ಬಾಲಕೃಷ್ಣ ಧನ್ಯವಾದವಿತ್ತರು.ಬಂಟ್ವಾಳದ ಸದಾಶಿವ ನಾಯಕ್ಕಾರ್ಯಕ್ರಮ ನಿರ್ವಹಿಸಿದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…