Advertisement
ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಣೆ: ರೋಗಿಗಳ ಸೇವೆಯೇ ದೇವರ ಸೇವೆ

Share

ಉಜಿರೆ: ವೈದ್ಯರು ಮಾನವೀಯತೆಯೊಂದಿಗೆ ಹಾಗೂ ನಗುಮುಖದಿಂದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಎರಡನೆ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆ, ಜೈಲು ಮತ್ತು ರುದ್ರಭೂಮಿ ನೋಡಿದಾಗ ನಮಗೆ ಆಧುನಿಕ ಜೀವನದ ಸಮಸ್ಯೆಗಳ ಅರಿವಾಗುತ್ತದೆ. ಆಧುನಿಕ ಜೀವನ ಶೈಲಿ, ಆಹಾರ ಸೇವನಾ ಕ್ರಮ, ಸದಾ ಒತ್ತಡದ ಕೆಲಸಗಳು, ಅತಿಯಾದ ತಂತ್ರಜ್ಞಾನದ ಬಳಕೆ, ವಾಯುಮಾಲಿನ್ಯ, ಮೊಬೈಲ್ ಫೋನ್ ಬಳಕೆ ಇತ್ಯಾದಿ ಕಾರಣಗಳಿಂದ ಇಂದು ಎಳೆಯ ಪ್ರಾಯದಲ್ಲೇ ಮನುಷ್ಯರು ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತ ಮೊದಲಾದ ಭೀಕರ ರೋಗಗಳಿಗೆ ಬಲಿಯಾಗುತ್ತಾರೆ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನದಿಂದ ನಾವು ಸಂಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದಬಹುದು ಎಂದು ಅವರು ಹೇಳಿದರು.

ಕೀಳರಿಮೆ ಹಾಗೂ ಅಹಂ ತ್ಯಜಿಸಿ ಧನಾತ್ಮಕ ಚಿಂತನೆಯೊಂದಿಗೆ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು. ವೈದ್ಯರು ರೋಗಿಗಳೊಂದಿಗೆ ನಗುಮೊಗದಿಂದ ಮಾನವೀತೆಯಿಂದ ಮಾತನಾಡಿ, ಶುಶ್ರೂಷೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು. ಅಲೋಪತಿ, ಹೋಮಿಯೋಪತಿ, ನಾಚುರೋಪತಿ ಇತ್ಯಾದಿ ವೈದ್ಯಕೀಯ ಪದ್ಧತಿಗಳಿಗಿಂತಲೂ ಮಿಗಿಲಾಗಿ ವೈದ್ಯರಿಗೆ ರೋಗಿಗಳಲ್ಲಿ ಸಿಂಪತಿ ಇರಬೇಕು ಎಂದು ಅವರು ಹೇಳಿದರು. ಉಪವಾಸ, ವ್ಯಾಯಾಮ, ಯೋಗಾಭ್ಯಾಸ, ನಿತ್ಯ ನಡಿಗೆ ಇತ್ಯಾದಿ ಕ್ರಿಯೆಗಳಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ಡಾ.ಮಂಜುನಾಥ್‍ ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವು ಪಂಚೇಂದ್ರಿಯಗಳ ದಾಸರಾಗಬಾರದು, ಒಡೆಯರಾಗಬೇಕು. ಪಂಚೇಂದ್ರೀಯಗಳ ನಿಯಂತ್ರಣದಿಂದ ರೋಗರಹಿತವಾಗಿ ಆರೋಗ್ಯಪೂರ್ಣ ಜೀವನ ನಡೆಸಬಹುದು. ಧಾರ್ಮಿಕ ಆಚಾರ-ವಿಚಾರಗಳ ಅನುಷ್ಠಾನದಿಂದ, ಸದಾಚಾರದೊಂದಿಗೆ ಆದರ್ಶಜೀವನ ನಡೆಸಬೇಕು. ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಯೋಗ, ಪ್ರಾರ್ಥನೆ, ಧ್ಯಾನ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯನ್ನು ಸ್ವಯಂ ಅನುಷ್ಠಾನ ಮಾಡಿ ಆಚಾರ್ಯರಾದರು ಎಂದು ಹೆಗ್ಗಡೆಯವರು ಹೇಳಿದರು.

ಪ್ರಕೃತಿಚಿಕಿತ್ಸಾ ವೈದ್ಯರು ಕೀಳರಿಮೆ ಹೊಂದದೆ ಅಭಿಮಾನದಿಂದ ಈ ಪದ್ಧತಿಯ ರಾಯಭಾರಿಗಳಾಗಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಡಾ. ನವೀನ್ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಮಹತ್ವ ವಿವರಿಸಿದರು. ಆಯುಷ್‍ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀಧರ ಭಟ್, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಮೂಡಬಿದ್ರೆಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ರೈ ಧನ್ಯವಾದವಿತ್ತರು. ಜೋಸ್ನಾ ಮತ್ತು ಅನನ್ಯ ಕಾರ್ಯಕ್ರಮ ನಿರ್ವಹಿಸಿದರು. ಎಂಟು ಕಾಲೇಜುಗಳಿಂದ ಮುನ್ನೂರು ಪ್ರತಿನಿಧಿಗಳು ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

10 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

11 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

14 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago