Advertisement
ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಣೆ: ರೋಗಿಗಳ ಸೇವೆಯೇ ದೇವರ ಸೇವೆ

Share

ಉಜಿರೆ: ವೈದ್ಯರು ಮಾನವೀಯತೆಯೊಂದಿಗೆ ಹಾಗೂ ನಗುಮುಖದಿಂದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಎರಡನೆ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆ, ಜೈಲು ಮತ್ತು ರುದ್ರಭೂಮಿ ನೋಡಿದಾಗ ನಮಗೆ ಆಧುನಿಕ ಜೀವನದ ಸಮಸ್ಯೆಗಳ ಅರಿವಾಗುತ್ತದೆ. ಆಧುನಿಕ ಜೀವನ ಶೈಲಿ, ಆಹಾರ ಸೇವನಾ ಕ್ರಮ, ಸದಾ ಒತ್ತಡದ ಕೆಲಸಗಳು, ಅತಿಯಾದ ತಂತ್ರಜ್ಞಾನದ ಬಳಕೆ, ವಾಯುಮಾಲಿನ್ಯ, ಮೊಬೈಲ್ ಫೋನ್ ಬಳಕೆ ಇತ್ಯಾದಿ ಕಾರಣಗಳಿಂದ ಇಂದು ಎಳೆಯ ಪ್ರಾಯದಲ್ಲೇ ಮನುಷ್ಯರು ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತ ಮೊದಲಾದ ಭೀಕರ ರೋಗಗಳಿಗೆ ಬಲಿಯಾಗುತ್ತಾರೆ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನದಿಂದ ನಾವು ಸಂಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದಬಹುದು ಎಂದು ಅವರು ಹೇಳಿದರು.

ಕೀಳರಿಮೆ ಹಾಗೂ ಅಹಂ ತ್ಯಜಿಸಿ ಧನಾತ್ಮಕ ಚಿಂತನೆಯೊಂದಿಗೆ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು. ವೈದ್ಯರು ರೋಗಿಗಳೊಂದಿಗೆ ನಗುಮೊಗದಿಂದ ಮಾನವೀತೆಯಿಂದ ಮಾತನಾಡಿ, ಶುಶ್ರೂಷೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು. ಅಲೋಪತಿ, ಹೋಮಿಯೋಪತಿ, ನಾಚುರೋಪತಿ ಇತ್ಯಾದಿ ವೈದ್ಯಕೀಯ ಪದ್ಧತಿಗಳಿಗಿಂತಲೂ ಮಿಗಿಲಾಗಿ ವೈದ್ಯರಿಗೆ ರೋಗಿಗಳಲ್ಲಿ ಸಿಂಪತಿ ಇರಬೇಕು ಎಂದು ಅವರು ಹೇಳಿದರು. ಉಪವಾಸ, ವ್ಯಾಯಾಮ, ಯೋಗಾಭ್ಯಾಸ, ನಿತ್ಯ ನಡಿಗೆ ಇತ್ಯಾದಿ ಕ್ರಿಯೆಗಳಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ಡಾ.ಮಂಜುನಾಥ್‍ ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವು ಪಂಚೇಂದ್ರಿಯಗಳ ದಾಸರಾಗಬಾರದು, ಒಡೆಯರಾಗಬೇಕು. ಪಂಚೇಂದ್ರೀಯಗಳ ನಿಯಂತ್ರಣದಿಂದ ರೋಗರಹಿತವಾಗಿ ಆರೋಗ್ಯಪೂರ್ಣ ಜೀವನ ನಡೆಸಬಹುದು. ಧಾರ್ಮಿಕ ಆಚಾರ-ವಿಚಾರಗಳ ಅನುಷ್ಠಾನದಿಂದ, ಸದಾಚಾರದೊಂದಿಗೆ ಆದರ್ಶಜೀವನ ನಡೆಸಬೇಕು. ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಯೋಗ, ಪ್ರಾರ್ಥನೆ, ಧ್ಯಾನ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯನ್ನು ಸ್ವಯಂ ಅನುಷ್ಠಾನ ಮಾಡಿ ಆಚಾರ್ಯರಾದರು ಎಂದು ಹೆಗ್ಗಡೆಯವರು ಹೇಳಿದರು.

ಪ್ರಕೃತಿಚಿಕಿತ್ಸಾ ವೈದ್ಯರು ಕೀಳರಿಮೆ ಹೊಂದದೆ ಅಭಿಮಾನದಿಂದ ಈ ಪದ್ಧತಿಯ ರಾಯಭಾರಿಗಳಾಗಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಡಾ. ನವೀನ್ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಮಹತ್ವ ವಿವರಿಸಿದರು. ಆಯುಷ್‍ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀಧರ ಭಟ್, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಮೂಡಬಿದ್ರೆಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ರೈ ಧನ್ಯವಾದವಿತ್ತರು. ಜೋಸ್ನಾ ಮತ್ತು ಅನನ್ಯ ಕಾರ್ಯಕ್ರಮ ನಿರ್ವಹಿಸಿದರು. ಎಂಟು ಕಾಲೇಜುಗಳಿಂದ ಮುನ್ನೂರು ಪ್ರತಿನಿಧಿಗಳು ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

12 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago