Advertisement
ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಣೆ: ರೋಗಿಗಳ ಸೇವೆಯೇ ದೇವರ ಸೇವೆ

Share

ಉಜಿರೆ: ವೈದ್ಯರು ಮಾನವೀಯತೆಯೊಂದಿಗೆ ಹಾಗೂ ನಗುಮುಖದಿಂದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಎರಡನೆ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆ, ಜೈಲು ಮತ್ತು ರುದ್ರಭೂಮಿ ನೋಡಿದಾಗ ನಮಗೆ ಆಧುನಿಕ ಜೀವನದ ಸಮಸ್ಯೆಗಳ ಅರಿವಾಗುತ್ತದೆ. ಆಧುನಿಕ ಜೀವನ ಶೈಲಿ, ಆಹಾರ ಸೇವನಾ ಕ್ರಮ, ಸದಾ ಒತ್ತಡದ ಕೆಲಸಗಳು, ಅತಿಯಾದ ತಂತ್ರಜ್ಞಾನದ ಬಳಕೆ, ವಾಯುಮಾಲಿನ್ಯ, ಮೊಬೈಲ್ ಫೋನ್ ಬಳಕೆ ಇತ್ಯಾದಿ ಕಾರಣಗಳಿಂದ ಇಂದು ಎಳೆಯ ಪ್ರಾಯದಲ್ಲೇ ಮನುಷ್ಯರು ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತ ಮೊದಲಾದ ಭೀಕರ ರೋಗಗಳಿಗೆ ಬಲಿಯಾಗುತ್ತಾರೆ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನದಿಂದ ನಾವು ಸಂಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದಬಹುದು ಎಂದು ಅವರು ಹೇಳಿದರು.

ಕೀಳರಿಮೆ ಹಾಗೂ ಅಹಂ ತ್ಯಜಿಸಿ ಧನಾತ್ಮಕ ಚಿಂತನೆಯೊಂದಿಗೆ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು. ವೈದ್ಯರು ರೋಗಿಗಳೊಂದಿಗೆ ನಗುಮೊಗದಿಂದ ಮಾನವೀತೆಯಿಂದ ಮಾತನಾಡಿ, ಶುಶ್ರೂಷೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು. ಅಲೋಪತಿ, ಹೋಮಿಯೋಪತಿ, ನಾಚುರೋಪತಿ ಇತ್ಯಾದಿ ವೈದ್ಯಕೀಯ ಪದ್ಧತಿಗಳಿಗಿಂತಲೂ ಮಿಗಿಲಾಗಿ ವೈದ್ಯರಿಗೆ ರೋಗಿಗಳಲ್ಲಿ ಸಿಂಪತಿ ಇರಬೇಕು ಎಂದು ಅವರು ಹೇಳಿದರು. ಉಪವಾಸ, ವ್ಯಾಯಾಮ, ಯೋಗಾಭ್ಯಾಸ, ನಿತ್ಯ ನಡಿಗೆ ಇತ್ಯಾದಿ ಕ್ರಿಯೆಗಳಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ಡಾ.ಮಂಜುನಾಥ್‍ ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವು ಪಂಚೇಂದ್ರಿಯಗಳ ದಾಸರಾಗಬಾರದು, ಒಡೆಯರಾಗಬೇಕು. ಪಂಚೇಂದ್ರೀಯಗಳ ನಿಯಂತ್ರಣದಿಂದ ರೋಗರಹಿತವಾಗಿ ಆರೋಗ್ಯಪೂರ್ಣ ಜೀವನ ನಡೆಸಬಹುದು. ಧಾರ್ಮಿಕ ಆಚಾರ-ವಿಚಾರಗಳ ಅನುಷ್ಠಾನದಿಂದ, ಸದಾಚಾರದೊಂದಿಗೆ ಆದರ್ಶಜೀವನ ನಡೆಸಬೇಕು. ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಯೋಗ, ಪ್ರಾರ್ಥನೆ, ಧ್ಯಾನ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯನ್ನು ಸ್ವಯಂ ಅನುಷ್ಠಾನ ಮಾಡಿ ಆಚಾರ್ಯರಾದರು ಎಂದು ಹೆಗ್ಗಡೆಯವರು ಹೇಳಿದರು.

ಪ್ರಕೃತಿಚಿಕಿತ್ಸಾ ವೈದ್ಯರು ಕೀಳರಿಮೆ ಹೊಂದದೆ ಅಭಿಮಾನದಿಂದ ಈ ಪದ್ಧತಿಯ ರಾಯಭಾರಿಗಳಾಗಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಡಾ. ನವೀನ್ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಮಹತ್ವ ವಿವರಿಸಿದರು. ಆಯುಷ್‍ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀಧರ ಭಟ್, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಮೂಡಬಿದ್ರೆಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ರೈ ಧನ್ಯವಾದವಿತ್ತರು. ಜೋಸ್ನಾ ಮತ್ತು ಅನನ್ಯ ಕಾರ್ಯಕ್ರಮ ನಿರ್ವಹಿಸಿದರು. ಎಂಟು ಕಾಲೇಜುಗಳಿಂದ ಮುನ್ನೂರು ಪ್ರತಿನಿಧಿಗಳು ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 hour ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

7 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

13 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

14 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

22 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

24 hours ago