Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ : ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ

Share

ಧರ್ಮಸ್ಥಳ:  ಪಾಶ್ಚಾತ್ಯ ಸಂಗೀತದ ಪ್ರಭಾವದಿಂದಯಕ್ಷಗಾನ, ಜನಪದ ಕಲೆಗಳು, ಶಾಸ್ತ್ರೀಯ ಸಂಗೀತ ಮೊದಲಾದ ಭಾರತೀಯ ಕಲಾಪ್ರಕಾರಗಳು ಮರೆಯಾಗಬಹುದೆಂಬ ಭಯ, ಆತಂಕ ಅಗತ್ಯವಿಲ್ಲ ಎಂದುಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಧರ್ಮಸ್ಥಳದಲ್ಲಿ ವಸಂತ ಮಹಲ್‍ನಲ್ಲಿ ಶ್ರೀ ಮಂಜುನಾಥ ಸ್ವಾಮಿದೇವಸ್ಥಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರಿನ ಸ್ವರಮೂರ್ತಿ ವಿ.ಎನ್. ರಾವ್ ಮೆಮೋರಿಯಲ್‍ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಡೆದ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವದಲ್ಲಿ ಸಂಗೀತ ಕಲಾನಿಧಿ ಎ. ಕನ್ಯಾಕುಮಾರಿ ಅವರಿಗೆ ವೀಣೆ ಶೇಷಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ (ಒಂದು ಲಕ್ಷರೂ. ನಗದು) ಹಾಗೂ ಸಂಗೀತಕಲಾರತ್ನ ನೀಲಾ ರಾಂಗೋಪಾಲ್‍ಅವರಿಗೆ ಸ್ವರಮೂರ್ತಿ ವಿ.ಎನ್. ರಾವ್ ಸ್ಮಾರಕರಾಷ್ಟ್ರೀಯ ಪ್ರಶಸ್ತಿ (ಒಂದು ಲಕ್ಷರೂ. ನಗದು) ನೀಡಿ ಗೌರವಿಸಿದರು. ಅನೇಕ ಮಂದಿ ಯುವಕಲಾವಿದರುವಿವಿಧ ಭಾರತೀಯ ಸಂಗೀತ ಕಲಾಪ್ರಕಾರಗಳನ್ನು ಆಸಕ್ತಿಯಿಂದಅಧ್ಯಯನ ಮಾಡಿಇಂದುಜಾಗತಿಕ ಮಟ್ಟದಲ್ಲಿಉನ್ನತ ಸಾಧನೆ ಮಾಡಿರುವುದೇಇದಕ್ಕೆ ಸಾಕ್ಷಿಯಾಗಿದೆ.ಯಾವುದೇರೀತಿಯ ಪಾಶ್ಚಾತ್ಯ ಸಂಗೀತ ಹಾಗೂ ವಾದ್ಯಗಳು ಭಾರತೀಯ ಮೂಲದ ಸಂಗೀತ ಪರಂಪರೆಯನ್ನು ಮೀರಿಸಲು ಸಾಧ್ಯವಿಲ್ಲ ಎಂದುಅವರು ಹೇಳಿದರು. ವೀಣೆ ಶೇಷಣ್ಣ ಸಂಗೀತೋತ್ಸವ, ಹಿರಿಯಕಲಾವಿದರನ್ನುಗೌರವಿಸುವುದು, ವಿಚಾರ ಸಂಕಿರಣ, ಸಂಗೀತ ಕಲಿಯುವವರಿಗೆ ಪ್ರೋತ್ಸಾಹ ನೀಡುವುದುಇತ್ಯಾದಿ ಕಾರ್ಯಕ್ರಮಗಳು ನಮ್ಮ ಭಾರತೀಯ ಸಂಗೀತ ಪರಂಪರೆಯನ್ನು ಉಳಿಸಿ – ಬೆಳೆಸಲು ಸಮಗೆ ಹೆಚ್ಚಿನ ಪ್ರೇರಣೆ ಮತ್ತು ಉತ್ಸಾಹವನ್ನು ನೀಡುತ್ತವೆ. ಭಾರತೀಯ ಸಂಗೀತ ಪ್ರಕಾರದ ವಾದ್ಯಗಳನ್ನು, ಸಂಗೀತ ಪರಿಕರಗಳನ್ನು ಉಳಿಸುವ ಕಾರ್ಯ ಮಾಡಬೇಕುಎಂದುಅವರು ಸಲಹೆ ನೀಡಿದರು.

ಕದ್ರಿ ಗೋಪಾಲನಾಥ್‍ ದಕ್ಷಿಣಕನ್ನಡಜಿಲ್ಲೆಯ ಅಮೂಲ್ಯ ಕಲಾರತ್ನ ಎಂದು ಬಣ್ಣಿಸಿದ ಹೆಗ್ಗಡೆಯವರು ಅವರ ಆತ್ಮಕ್ಕೆಚಿರಶಾಂತಿಯನ್ನುಕೋರಿದರು.ಇಂದಿನ ಸಮಾರಂಭಕ್ಕೆ ಆಹ್ವಾನಿಸುವ ಯೋಚನೆಇತ್ತು.

ಪ್ರಶಸ್ತಿ ಪುರಸ್ಕೃತರಾದ ಎ. ಕನ್ಯಾಕುಮಾರಿ ಮಾನಾಡಿ,ತನ್ನಕಲಾಸಾಧನೆಗೆ ಪ್ರೋತ್ಸಾಹಿಸಿದ ಎಂ.ಎಲ್. ವಸಂತಕುಮಾರಿ, ಕದ್ರಿ ಗೋಪಾಲನಾಥ್ ಮೊದಲಾದವರನ್ನುಕೃತಜ್ಞತೆಯಿಂದ ಸ್ಮರಿಸಿದರು.

ಪ್ರಶಸ್ತಿ ಪುರಸ್ಕೃತರಾದ ನೀಲಾ ರಾಂಗೋಪಾಲ್ ಮಾತನಾಡಿ ಶ್ರೀ ಮಂಜುನಾಥ ಸ್ವಾಮಿಯಅನುಗ್ರಹದಿಂದತಾನು ಮುಂದೆಯೂ ನಿರಂತರ ಕಲಾಸೇವೆ ಮಾಡುವುದಾಗಿ ಹೇಳಿದರು.

ಬೆಂಗಳೂರಿನ ಸ್ವರಮೂರ್ತಿ ವಿ.ಎನ್. ರಾವ್ ಮೆಮೋರಿಯಲ್‍ ಟ್ರಸ್ಟ್ ನ ಅಧ್ಯಕ್ಷ ಪ್ರೊ.ಮೈಸೂರು ವಿ.ಸುಬ್ರಹ್ಮಣ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ವೀಣೆ ಮತ್ತು ಮೈಸೂರಿಗೆಇರುವ ಅವಿನಾಭಾವ ಸಂಬಂಧವನ್ನು ವಿವರಿಸಿ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವದ ಮೂಲಕ ಅನೇಕ ಹಿರಿಯ ಕಲಾವಿದರನ್ನು ಗೌರವಿಸಲಾಗುತ್ತದೆಎಂದರು.

ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಡಿ. ಹರ್ಷೇಂದ್ರಕುಮಾರ್ ಸ್ವಾಗತಿಸಿದರು. ಶ್ಯಾಮ ಸುಂದರಶರ್ಮ ಧನ್ಯವಾದವಿತ್ತರು. ರಾಧಿಕಾ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

4 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

16 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

16 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago