Advertisement
ಧಾರ್ಮಿಕ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸನ್ಮಾನ

Share

ಉಜಿರೆ: ಭಕ್ತರ ದೋಷಗಳನ್ನು ಗ್ರಹಣ ಮಾಡಿ, ಸಂಕಷ್ಟಗಳನ್ನು ಪರಿಹರಿಸುವ ಶಕ್ತಿ ಹೊಂದಿರುವ ಸಾನ್ನಿಧ್ಯಗಳು ತೀರ್ಥಕ್ಷೇತ್ರಗಳಾಗಿ ಬೆಳಗುತ್ತವೆ, ಬೆಳೆಯುತ್ತವೆ. ಸಾರ್ಥಕ ಬದುಕಿಗೆ ದಾರಿದೀಪವಾಗುತ್ತವೆ. ತಮ್ಮಲ್ಲಿರುವ ಕೋಪ, ದ್ವೇಷ, ಅಸೂಯೆ ಮೊದಲಾದ ಅರಿಷಡ್ವರ್ಗಗಳನ್ನು ಕಳಚಿ, ದುಃಖ, ದುಮ್ಮಾನಗಳನ್ನು ಮರೆಯಲು ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತರು ಬರುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಗುರುವಾರ ರಾತ್ರಿ ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆಗೆ ಬಂದ ಪಾದಯಾತ್ರಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಶಿವ ಭಕ್ತರ ಸರ್ವ ದೋಷಗಳನ್ನು ಸ್ವೀಕರಿಸಿ “ವಿಷಕಂಠ”ನಾಗಿ ಭಕ್ತರ ಅಭೀಷ್ಠಗಳನ್ನು ಈಡೇರಿಸಿ ಮಂಗಳಕಾರಕನಾಗಿಯೂ ಸದಾ ಭಕ್ತರನ್ನುಅನುಗ್ರಹಿಸುತ್ತಾರೆ.
ನೇತ್ರಾವತಿ ನದಿಯಲ್ಲಿ ಮಿಂದು ಬಹಿರಂಗ ಪರಿಶುದ್ಧಿಯೊಂದಿಗೆ, ಉಪವಾಸ, ವ್ರತ-ನಿಯಮಗಳ ಪಾಲನೆಯೊಂದಿಗೆ ಅಂತರಂಗ ಶುದ್ಧಿಯಿಂದ ದೇವರನ್ನು ಪ್ರಾರ್ಥಿಸಿದಾಗ ಸಕಲ ದೋಷಗಳ ನಿವಾರಣೆಯಾಗಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ಪ್ರಸ್ತುತ ಮೊಬೈಲ್ ಫೋನ್‍ ಕಾಟದಿಂದ ಜಪ, ತಪ, ಪ್ರಾರ್ಥನೆ, ಧ್ಯಾನಕ್ಕೂಅಡಚಣೆಯಾಗುತ್ತಿದೆ. ಮನಸ್ಸಿನಲ್ಲಿ ಏಕಾಗ್ರತೆ ಇರುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಹಿತ-ಮಿತವಾಗಿ ಮೊಬೈಲ್ ಬಳಸಿ ಎಂಬ ಕಿವಿಮಾತನ್ನೂ ಹೇಳಿದರು.

ಅನೇಕ ಮಂದಿ ಪಾದಯಾತ್ರಿಗಳು ಒಂದೆರಡು ದಿನ ಮುಂಚಿತವಾಗಿ ಬಂದು ದೇವರ ದರ್ಶನ ಮಾಡಿ ಇತರ ಭಕ್ತರಿಗೆ ಅನುಕೂಲ ಮಾಡಿದ್ದಾರೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಪಾದಯಾತ್ರಿಗಳಲ್ಲಿರುವ ಶಿಸ್ತು, ಸಂಯಮ, ಸ್ವಚ್ಛತೆ ಬಗ್ಗೆ ಕಾಳಜಿ ಇತ್ಯಾದಿಗಳನ್ನು ಹೆಗ್ಗಡೆಯವರು ಶ್ಲಾಘಿಸಿ ಎಲ್ಲರಿಗೂ ಪಾದಯಾತ್ರೆಯ ಫಲ ಸಿಗಲಿ. ಮಳೆ-ಬೆಳೆ ಚೆನ್ನಾಗಿ ಆಗಲಿ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲಿ ಹಾಗೂ ಲೋಕಕಲ್ಯಾಣವಾಗಲಿ ಎಂದು ಅವರು ಹಾರೈಸಿದರು.

ಪಾದಯಾತ್ರಿಗಳ ತಂಡದ ನಾಯಕ ಬೆಂಗಳೂರಿನ ಹನುಮಂತಪ್ಪ ಸ್ವಾಮೀಜಿ ಮತ್ತು ಶಶಿಕುಮಾರ್ ಹಾಗೂ ಇತರರನ್ನು ಹೆಗ್ಗಡೆಯವರು ಗೌರವಿಸಿದರು. ಹನುಂತಪ್ಪ ಸ್ವಾಮೀಜಿ ಮಾತನಾಡಿ ಮುಂದಿನ ವರ್ಷ ಆಯಾ ಊರುಗಳಲ್ಲೆ ಪಾದಯಾತ್ರಿಗಳ ತಂಡ ರಚಿಸಿ, ಸುಗಮ ಪಾದಯಾತ್ರೆ ಮಾಡಬೇಕು ಎಂದು ಸಲಹೆ ನೀಡಿದರು. ಹೇಮಾವತಿ ವಿ. ಹೆಗ್ಗಡೆಯವರು, ನಾಗರಾಜರೆಡ್ಡಿ ಮತ್ತು ಮರಿಯಪ್ಪಗುರು ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

9 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

16 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

24 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago