Advertisement
ಧಾರ್ಮಿಕ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸನ್ಮಾನ

Share

ಉಜಿರೆ: ಭಕ್ತರ ದೋಷಗಳನ್ನು ಗ್ರಹಣ ಮಾಡಿ, ಸಂಕಷ್ಟಗಳನ್ನು ಪರಿಹರಿಸುವ ಶಕ್ತಿ ಹೊಂದಿರುವ ಸಾನ್ನಿಧ್ಯಗಳು ತೀರ್ಥಕ್ಷೇತ್ರಗಳಾಗಿ ಬೆಳಗುತ್ತವೆ, ಬೆಳೆಯುತ್ತವೆ. ಸಾರ್ಥಕ ಬದುಕಿಗೆ ದಾರಿದೀಪವಾಗುತ್ತವೆ. ತಮ್ಮಲ್ಲಿರುವ ಕೋಪ, ದ್ವೇಷ, ಅಸೂಯೆ ಮೊದಲಾದ ಅರಿಷಡ್ವರ್ಗಗಳನ್ನು ಕಳಚಿ, ದುಃಖ, ದುಮ್ಮಾನಗಳನ್ನು ಮರೆಯಲು ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತರು ಬರುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಗುರುವಾರ ರಾತ್ರಿ ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆಗೆ ಬಂದ ಪಾದಯಾತ್ರಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಶಿವ ಭಕ್ತರ ಸರ್ವ ದೋಷಗಳನ್ನು ಸ್ವೀಕರಿಸಿ “ವಿಷಕಂಠ”ನಾಗಿ ಭಕ್ತರ ಅಭೀಷ್ಠಗಳನ್ನು ಈಡೇರಿಸಿ ಮಂಗಳಕಾರಕನಾಗಿಯೂ ಸದಾ ಭಕ್ತರನ್ನುಅನುಗ್ರಹಿಸುತ್ತಾರೆ.
ನೇತ್ರಾವತಿ ನದಿಯಲ್ಲಿ ಮಿಂದು ಬಹಿರಂಗ ಪರಿಶುದ್ಧಿಯೊಂದಿಗೆ, ಉಪವಾಸ, ವ್ರತ-ನಿಯಮಗಳ ಪಾಲನೆಯೊಂದಿಗೆ ಅಂತರಂಗ ಶುದ್ಧಿಯಿಂದ ದೇವರನ್ನು ಪ್ರಾರ್ಥಿಸಿದಾಗ ಸಕಲ ದೋಷಗಳ ನಿವಾರಣೆಯಾಗಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ಪ್ರಸ್ತುತ ಮೊಬೈಲ್ ಫೋನ್‍ ಕಾಟದಿಂದ ಜಪ, ತಪ, ಪ್ರಾರ್ಥನೆ, ಧ್ಯಾನಕ್ಕೂಅಡಚಣೆಯಾಗುತ್ತಿದೆ. ಮನಸ್ಸಿನಲ್ಲಿ ಏಕಾಗ್ರತೆ ಇರುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಹಿತ-ಮಿತವಾಗಿ ಮೊಬೈಲ್ ಬಳಸಿ ಎಂಬ ಕಿವಿಮಾತನ್ನೂ ಹೇಳಿದರು.

ಅನೇಕ ಮಂದಿ ಪಾದಯಾತ್ರಿಗಳು ಒಂದೆರಡು ದಿನ ಮುಂಚಿತವಾಗಿ ಬಂದು ದೇವರ ದರ್ಶನ ಮಾಡಿ ಇತರ ಭಕ್ತರಿಗೆ ಅನುಕೂಲ ಮಾಡಿದ್ದಾರೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಪಾದಯಾತ್ರಿಗಳಲ್ಲಿರುವ ಶಿಸ್ತು, ಸಂಯಮ, ಸ್ವಚ್ಛತೆ ಬಗ್ಗೆ ಕಾಳಜಿ ಇತ್ಯಾದಿಗಳನ್ನು ಹೆಗ್ಗಡೆಯವರು ಶ್ಲಾಘಿಸಿ ಎಲ್ಲರಿಗೂ ಪಾದಯಾತ್ರೆಯ ಫಲ ಸಿಗಲಿ. ಮಳೆ-ಬೆಳೆ ಚೆನ್ನಾಗಿ ಆಗಲಿ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲಿ ಹಾಗೂ ಲೋಕಕಲ್ಯಾಣವಾಗಲಿ ಎಂದು ಅವರು ಹಾರೈಸಿದರು.

ಪಾದಯಾತ್ರಿಗಳ ತಂಡದ ನಾಯಕ ಬೆಂಗಳೂರಿನ ಹನುಮಂತಪ್ಪ ಸ್ವಾಮೀಜಿ ಮತ್ತು ಶಶಿಕುಮಾರ್ ಹಾಗೂ ಇತರರನ್ನು ಹೆಗ್ಗಡೆಯವರು ಗೌರವಿಸಿದರು. ಹನುಂತಪ್ಪ ಸ್ವಾಮೀಜಿ ಮಾತನಾಡಿ ಮುಂದಿನ ವರ್ಷ ಆಯಾ ಊರುಗಳಲ್ಲೆ ಪಾದಯಾತ್ರಿಗಳ ತಂಡ ರಚಿಸಿ, ಸುಗಮ ಪಾದಯಾತ್ರೆ ಮಾಡಬೇಕು ಎಂದು ಸಲಹೆ ನೀಡಿದರು. ಹೇಮಾವತಿ ವಿ. ಹೆಗ್ಗಡೆಯವರು, ನಾಗರಾಜರೆಡ್ಡಿ ಮತ್ತು ಮರಿಯಪ್ಪಗುರು ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

7 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

7 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

7 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

7 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

17 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

20 hours ago