ಧಾರ್ಮಿಕ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಶಿವನಾಮ ಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಜಿರೆ: ಮೊದಲು ನಮ್ಮನ್ನು ನಾವು ಅರಿತುಕೊಂಡು, ಮನ-ವಚನ-ಕಾಯದಿಂದ ಪರಿಶುದ್ಧರಾಗಿ, ದೃಢಭಕ್ತಿ ಮತ್ತು ಅಚಲ ವಿಶ್ವಾಸದಿಂದ ದೇವರ ನಾಮಸ್ಮರಣೆ ಮಾಡಿ ಸಾರ್ಥಕ ಜೀವನ ನಡೆಸಬೇಕು. ಆಚಾರವೇ ಶ್ರೇಷ್ಠವಾದ ಧರ್ಮ, ಅಭಯದಾನವೇ ಶ್ರೇಷ್ಠವಾದ ದಾನವಾಗಿದೆ. ಧರ್ಮಸ್ಥಳವು ಜಾತಿ – ಮತ ಬೇಧವಿಲ್ಲದೆ ಸಕಲ ಭಕ್ತರಿಗೂ “ಎಂದೂ ಭಯಪಡಬೇಡಿ” ಎಂದು ಸದಾ ಅಭಯದಾನ ನೀಡುವ ಪವಿತ್ರ ಕ್ಷೇತ್ರವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Advertisement
Advertisement

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ನಡೆಯುವ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ನಂದಾದೀಪ ಬೆಳಗಿಸಿ ಶುಭ ಹಾರೈಸಿ ಮಾತನಾಡಿದರು.

ಎಲ್ಲರೂ ಅಂತರಂಗ ದರ್ಶನ ಮಾಡಿಕೊಂಡು ಸಂಯಮದಿಂದ ಹಂಸಕ್ಷೀರ ನ್ಯಾಯದಂತೆ ಸದಾ ಸತ್ಕಾರ್ಯಗಳನ್ನು ಮಾಡಿ ಪುಣ್ಯ ಸಂಚಯ ಮಾಡಬೇಕು. ಕೆಟ್ಟ ಕೆಲಸಗಳಿಂದ ಪಾಪಬಂಧವಾದರೆ, ಸತ್ಕಾರ್ಯಗಳಿಂದ ಪುಣ್ಯ ಸಂಚಯವಾಗುತ್ತದೆ. ಎಲ್ಲರೂ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಹಾದಿಯಲ್ಲಿ ನಡೆದಾಗ ಎಲ್ಲೆಲ್ಲೂ ಶಾಂತಿ, ನೆಮ್ಮದಿಯಿಂದ ಲೋಕ ಕಲ್ಯಾಣವಾಗುತ್ತದೆ. ನಮ್ಮಲ್ಲಿರುವ ಅರಿಷಡ್ವರ್ಗಗಳನ್ನು ತ್ಯಜಿಸಿ ನಡೆ-ನುಡಿ, ವ್ಯವಹಾರವನ್ನು ಧರ್ಮದ ನೆಲೆಯಲ್ಲಿ ಮಾಡಬೇಕು. ಮಾತೇ ಮಾಣಿಕ್ಯವಾಗಬೇಕು. ಆದುದರಿಂದಲೇ “ಮಾತು ಬಿಡ ಮಂಜುನಾಥ” ಎಂಬ ಮಾತು ಧರ್ಮಸ್ಥಳಕ್ಕೆ ಸಂಬಂಧಪಟ್ಟಂತೆ ಪ್ರಚಲಿತವಿದೆ. ಆದುದರಿಂದಲೇ ಇಲ್ಲಿ ವಾಕ್‍ದೋಷ ಪರಿಹಾರ, ವಾಕ್‍ತಿರ್ಮಾನ, ಆಣೆಮಾತು ತೀರ್ಮಾನ ಮೊದಲಾದ ಪರಿಹಾರ ವಿಧಾನಗಳಿವೆ. ಭಕ್ತರ ದೋಷಗಳನ್ನೆಲ್ಲ ದೇವರಿಗೆ ಅರ್ಪಿಸಿ ತಮ್ಮ ತಪ್ಪನ್ನು ಅರಿತು, ತಿದ್ದಿಕೊಂಡು ನವ ಜೀವನ ನಡೆಸುವ ಸದವಕಾಶವನ್ನು ಅಭಯದಾನದ ಮೂಲಕ ನೀಡಲಾಗುತ್ತದೆ.

ಆಹಾರ, ನಿದ್ರೆ ಮತ್ತು ಭಯ – ಎಲ್ಲಾ ಪ್ರಾಣಿಗಳಿಗೂ ಸಹಜ ಕ್ರಿಯೆಯಾದರೂ ವಿವೇಕ ಶೀಲರಾದ ಮನುಷ್ಯರು ಎಲ್ಲಾ ವ್ಯವಹಾರಗಳನ್ನು ಸತ್ಯ, ಧರ್ಮ ಮತ್ತು ನ್ಯಾಯದ ನೆಲೆಯಲ್ಲಿ ಮಾಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

Advertisement

ಶ್ರೀ ಮಂಜುನಾಥ ಸ್ವಾಮಿಗೆ ಸಾಮೂಹಿಕ ನಮನಗಳನ್ನು ಸಮರ್ಪಿಸಿ, ಓಂಕಾರ, ಮೂರು ಬಾರಿ ಶಂಖನಾದ ಹಾಗೂ ಹತ್ತು ನಿಮಿಷ ಎಲ್ಲರೂ ಸಾಮೂಹಿಕ ಮೌನಧ್ಯಾನ ಮಾಡಿದ ಬಳಿಕ ಹೆಗ್ಗಡೆಯವರು ಜ್ಯೋತಿ ಬೆಳಗಿಸಿ ಶಿವ ಪಂಚಾಕ್ಷರಿ ಆಹೋ ರಾತ್ರಿ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ, ಬೆಂಗಳೂರಿನ ಪಾದಯಾತ್ರಿಗಳ ಸಂಘದ ನಾಯಕ ಹನುಮಂತಪ್ಪ, ಮರಿಸ್ವಾಮಿ ಮತ್ತು ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

47 minutes ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

1 hour ago

ಗ್ರಾಮೀಣರಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೇವೆ | ಸಿಎಸ್‌ಸಿ ಮೊಬೈಲ್‌ ವಾಹನ |

ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…

2 hours ago

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸೌಲಭ್ಯಕ್ಕೆ ರೈತರ ಸೌಲಭ್ಯಕ್ಕೆ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ…

2 hours ago

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ…

2 hours ago

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

10 hours ago