Advertisement
ಧಾರ್ಮಿಕ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಶಿವನಾಮ ಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ

Share

ಉಜಿರೆ: ಮೊದಲು ನಮ್ಮನ್ನು ನಾವು ಅರಿತುಕೊಂಡು, ಮನ-ವಚನ-ಕಾಯದಿಂದ ಪರಿಶುದ್ಧರಾಗಿ, ದೃಢಭಕ್ತಿ ಮತ್ತು ಅಚಲ ವಿಶ್ವಾಸದಿಂದ ದೇವರ ನಾಮಸ್ಮರಣೆ ಮಾಡಿ ಸಾರ್ಥಕ ಜೀವನ ನಡೆಸಬೇಕು. ಆಚಾರವೇ ಶ್ರೇಷ್ಠವಾದ ಧರ್ಮ, ಅಭಯದಾನವೇ ಶ್ರೇಷ್ಠವಾದ ದಾನವಾಗಿದೆ. ಧರ್ಮಸ್ಥಳವು ಜಾತಿ – ಮತ ಬೇಧವಿಲ್ಲದೆ ಸಕಲ ಭಕ್ತರಿಗೂ “ಎಂದೂ ಭಯಪಡಬೇಡಿ” ಎಂದು ಸದಾ ಅಭಯದಾನ ನೀಡುವ ಪವಿತ್ರ ಕ್ಷೇತ್ರವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ನಡೆಯುವ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ನಂದಾದೀಪ ಬೆಳಗಿಸಿ ಶುಭ ಹಾರೈಸಿ ಮಾತನಾಡಿದರು.

ಎಲ್ಲರೂ ಅಂತರಂಗ ದರ್ಶನ ಮಾಡಿಕೊಂಡು ಸಂಯಮದಿಂದ ಹಂಸಕ್ಷೀರ ನ್ಯಾಯದಂತೆ ಸದಾ ಸತ್ಕಾರ್ಯಗಳನ್ನು ಮಾಡಿ ಪುಣ್ಯ ಸಂಚಯ ಮಾಡಬೇಕು. ಕೆಟ್ಟ ಕೆಲಸಗಳಿಂದ ಪಾಪಬಂಧವಾದರೆ, ಸತ್ಕಾರ್ಯಗಳಿಂದ ಪುಣ್ಯ ಸಂಚಯವಾಗುತ್ತದೆ. ಎಲ್ಲರೂ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಹಾದಿಯಲ್ಲಿ ನಡೆದಾಗ ಎಲ್ಲೆಲ್ಲೂ ಶಾಂತಿ, ನೆಮ್ಮದಿಯಿಂದ ಲೋಕ ಕಲ್ಯಾಣವಾಗುತ್ತದೆ. ನಮ್ಮಲ್ಲಿರುವ ಅರಿಷಡ್ವರ್ಗಗಳನ್ನು ತ್ಯಜಿಸಿ ನಡೆ-ನುಡಿ, ವ್ಯವಹಾರವನ್ನು ಧರ್ಮದ ನೆಲೆಯಲ್ಲಿ ಮಾಡಬೇಕು. ಮಾತೇ ಮಾಣಿಕ್ಯವಾಗಬೇಕು. ಆದುದರಿಂದಲೇ “ಮಾತು ಬಿಡ ಮಂಜುನಾಥ” ಎಂಬ ಮಾತು ಧರ್ಮಸ್ಥಳಕ್ಕೆ ಸಂಬಂಧಪಟ್ಟಂತೆ ಪ್ರಚಲಿತವಿದೆ. ಆದುದರಿಂದಲೇ ಇಲ್ಲಿ ವಾಕ್‍ದೋಷ ಪರಿಹಾರ, ವಾಕ್‍ತಿರ್ಮಾನ, ಆಣೆಮಾತು ತೀರ್ಮಾನ ಮೊದಲಾದ ಪರಿಹಾರ ವಿಧಾನಗಳಿವೆ. ಭಕ್ತರ ದೋಷಗಳನ್ನೆಲ್ಲ ದೇವರಿಗೆ ಅರ್ಪಿಸಿ ತಮ್ಮ ತಪ್ಪನ್ನು ಅರಿತು, ತಿದ್ದಿಕೊಂಡು ನವ ಜೀವನ ನಡೆಸುವ ಸದವಕಾಶವನ್ನು ಅಭಯದಾನದ ಮೂಲಕ ನೀಡಲಾಗುತ್ತದೆ.

ಆಹಾರ, ನಿದ್ರೆ ಮತ್ತು ಭಯ – ಎಲ್ಲಾ ಪ್ರಾಣಿಗಳಿಗೂ ಸಹಜ ಕ್ರಿಯೆಯಾದರೂ ವಿವೇಕ ಶೀಲರಾದ ಮನುಷ್ಯರು ಎಲ್ಲಾ ವ್ಯವಹಾರಗಳನ್ನು ಸತ್ಯ, ಧರ್ಮ ಮತ್ತು ನ್ಯಾಯದ ನೆಲೆಯಲ್ಲಿ ಮಾಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಶ್ರೀ ಮಂಜುನಾಥ ಸ್ವಾಮಿಗೆ ಸಾಮೂಹಿಕ ನಮನಗಳನ್ನು ಸಮರ್ಪಿಸಿ, ಓಂಕಾರ, ಮೂರು ಬಾರಿ ಶಂಖನಾದ ಹಾಗೂ ಹತ್ತು ನಿಮಿಷ ಎಲ್ಲರೂ ಸಾಮೂಹಿಕ ಮೌನಧ್ಯಾನ ಮಾಡಿದ ಬಳಿಕ ಹೆಗ್ಗಡೆಯವರು ಜ್ಯೋತಿ ಬೆಳಗಿಸಿ ಶಿವ ಪಂಚಾಕ್ಷರಿ ಆಹೋ ರಾತ್ರಿ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ, ಬೆಂಗಳೂರಿನ ಪಾದಯಾತ್ರಿಗಳ ಸಂಘದ ನಾಯಕ ಹನುಮಂತಪ್ಪ, ಮರಿಸ್ವಾಮಿ ಮತ್ತು ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

3 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

6 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

11 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

18 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

18 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago