ಉಜಿರೆ: ಧರ್ಮಸ್ಥಳದಲ್ಲಿ ಬುಧವಾರ ರಾತ್ರಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು.
ಹೆಗ್ಗಡೆಯವರ ನಿವಾಸದಿಂದ (ಬೀಡಿನಿಂದ) ಸಂಜೆ ಏಳು ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ಮಹೋತ್ಸವ ಸಭಾ ಭವನಕ್ಕೆ ಹೋದ ಬಳಿಕ ಅಲ್ಲಿ ಪಂಚ ನಮಸ್ಕಾರ ಮಂತ್ರ ಪಠಣ, ಸಮವಸರಣ ಪೂಜಾ ಮಂತ್ರ ಪಠಣ ಆದ ಮೇಲೆ ಶ್ರಾವಕ-ಶ್ರಾವಿಕೆಯರಿಂದ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಗಣಧರ ಪರಮೇಷ್ಠಿ ಪೂಜೆ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಪೂಜೆ ಮತ್ತು ಶ್ರುತ ಪೂಜೆ ನಡೆಯಿತು.
ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಹಾಗೂ ಬಳಗದವರು ಪೂಜಾ ಮಂತ್ರ ಪಠಣ ಮಾಡಿದರು. ಕ್ಷುಲ್ಲಕ 105 ಶ್ರೀ ನಿರ್ಮಲ ಸಾಗರ್ಜಿ ಉಪಸ್ಥಿತರಿದ್ದರು.
ಶಿಶಿರ್ ಇಂದ್ರರ ನೇತೃತ್ವದಲ್ಲಿ ನಡೆದ ಅಷ್ಟವಿಧಾರ್ಚನೆ ಸಂಗೀತ ಪೂಜಾ ಮಂತ್ರ ಪಠಣದಲ್ಲಿ ಮಲ್ಲಿನಾಥ್ಜೈನ್, ಸೌಮ್ಯಎಸ್. ರಾಜ್, ಅಭಿಜ್ಞಾ ಬಳ್ಳಾಲ್, ಮಂಜುಳಾ, ಎಂ.ಸಾವಿತ್ರಿ ಪುಷ್ಪದಂತ ಹಾಗೂ ಹಿಮ್ಮೇಳದಲ್ಲಿ ಭಗೀರಥ ಮತ್ತು ಶೋಧನ್ ಸಹಕರಿಸಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಉಪಸ್ಥಿತರಿದ್ದರು. ಪಾಕ ಪರಿಣತರಾದ ಕನ್ನಡಿಕಟ್ಟೆಯ ರತ್ನರಾಜ ಮತ್ತು ಇರ್ವತ್ತೂರು ಜಯಕೀರ್ತಿ ಜೈನ್ ಅವರನ್ನು ಸನ್ಮಾನಿಸಲಾಯಿತು.
ಮಹಾ ಮಂಗಳಾರತಿ ನಂತರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ತರಲಾಯಿತು. ಶ್ರೀ ಬಾಹುಬಲಿ ಸೇವಾ ಸಮಿತಿಯ ಸದಸ್ಯರು ಸಹಕರಿಸಿದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…