ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವಕ್ಕೆ ಪೂರ್ವಭಾವಿಯಾಗಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು. 114 ಮಂದಿ ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಸಿ 292 ಗೋಣಿ ಕಸ ಸಂಗ್ರಹಿಸಿದರು.
ಬಳಿಕ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಹೇಮಾವತಿ ವಿ.ಹೆಗ್ಗಡೆಯವರು ಮಾತನಾಡಿ, ಕಸ ಎಸೆದು ಸ್ವಚ್ಛತಾ ಕಾರ್ಯಕ್ರಮ ಮಾಡುವುದಕ್ಕಿಂತ ಕಸ ಎಸೆಯದಂತೆ ದೃಢ ಸಂಕಲ್ಪ ಮಾಡಿ ಮುಂಜಾಗರೂಕತೆ ವಹಿಸಬೇಕು. ಶಾಲಾ-ಕಾಲೇಜುಗಳ ಪಠ್ಯದಲ್ಲಿಯೇ ಸ್ವಚ್ಛತೆಯ ಪಾಠ ಕಲಿಸಬೇಕು ಎಂದು ಸಲಹೆ ನೀಡಿದರು. ಕಸ ಎಸೆದವನಿಂದಲೇ ಕಸ ಹೆಕ್ಕುವ ಅಭಿಯಾನ ಆರಂಭಿಸಿದಲ್ಲಿ ನಮ್ಮ ಪರಿಸರ ಸ್ವಚ್ಛವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಸುಪ್ರಿಯಾ ಹರ್ಷೇಂದ್ರಕುಮಾರ್, ಮನುಷ್ಯರಿಂದಾಗಿಯೇ ಪರಿಸರಕ್ಕೆ ಹಾನಿಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್, ಯೋಜನಾಧಿಕಾರಿ ಪ್ರವೀಣ್, ನಿರ್ದೇಶಕ ಲಕ್ಷ್ಮಣ್ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…