ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವಕ್ಕೆ ಪೂರ್ವಭಾವಿಯಾಗಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು. 114 ಮಂದಿ ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಸಿ 292 ಗೋಣಿ ಕಸ ಸಂಗ್ರಹಿಸಿದರು.
ಬಳಿಕ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಹೇಮಾವತಿ ವಿ.ಹೆಗ್ಗಡೆಯವರು ಮಾತನಾಡಿ, ಕಸ ಎಸೆದು ಸ್ವಚ್ಛತಾ ಕಾರ್ಯಕ್ರಮ ಮಾಡುವುದಕ್ಕಿಂತ ಕಸ ಎಸೆಯದಂತೆ ದೃಢ ಸಂಕಲ್ಪ ಮಾಡಿ ಮುಂಜಾಗರೂಕತೆ ವಹಿಸಬೇಕು. ಶಾಲಾ-ಕಾಲೇಜುಗಳ ಪಠ್ಯದಲ್ಲಿಯೇ ಸ್ವಚ್ಛತೆಯ ಪಾಠ ಕಲಿಸಬೇಕು ಎಂದು ಸಲಹೆ ನೀಡಿದರು. ಕಸ ಎಸೆದವನಿಂದಲೇ ಕಸ ಹೆಕ್ಕುವ ಅಭಿಯಾನ ಆರಂಭಿಸಿದಲ್ಲಿ ನಮ್ಮ ಪರಿಸರ ಸ್ವಚ್ಛವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಸುಪ್ರಿಯಾ ಹರ್ಷೇಂದ್ರಕುಮಾರ್, ಮನುಷ್ಯರಿಂದಾಗಿಯೇ ಪರಿಸರಕ್ಕೆ ಹಾನಿಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್, ಯೋಜನಾಧಿಕಾರಿ ಪ್ರವೀಣ್, ನಿರ್ದೇಶಕ ಲಕ್ಷ್ಮಣ್ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…