ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವಕ್ಕೆ ಪೂರ್ವಭಾವಿಯಾಗಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು. 114 ಮಂದಿ ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಸಿ 292 ಗೋಣಿ ಕಸ ಸಂಗ್ರಹಿಸಿದರು.
ಬಳಿಕ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಹೇಮಾವತಿ ವಿ.ಹೆಗ್ಗಡೆಯವರು ಮಾತನಾಡಿ, ಕಸ ಎಸೆದು ಸ್ವಚ್ಛತಾ ಕಾರ್ಯಕ್ರಮ ಮಾಡುವುದಕ್ಕಿಂತ ಕಸ ಎಸೆಯದಂತೆ ದೃಢ ಸಂಕಲ್ಪ ಮಾಡಿ ಮುಂಜಾಗರೂಕತೆ ವಹಿಸಬೇಕು. ಶಾಲಾ-ಕಾಲೇಜುಗಳ ಪಠ್ಯದಲ್ಲಿಯೇ ಸ್ವಚ್ಛತೆಯ ಪಾಠ ಕಲಿಸಬೇಕು ಎಂದು ಸಲಹೆ ನೀಡಿದರು. ಕಸ ಎಸೆದವನಿಂದಲೇ ಕಸ ಹೆಕ್ಕುವ ಅಭಿಯಾನ ಆರಂಭಿಸಿದಲ್ಲಿ ನಮ್ಮ ಪರಿಸರ ಸ್ವಚ್ಛವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಸುಪ್ರಿಯಾ ಹರ್ಷೇಂದ್ರಕುಮಾರ್, ಮನುಷ್ಯರಿಂದಾಗಿಯೇ ಪರಿಸರಕ್ಕೆ ಹಾನಿಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್, ಯೋಜನಾಧಿಕಾರಿ ಪ್ರವೀಣ್, ನಿರ್ದೇಶಕ ಲಕ್ಷ್ಮಣ್ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…