ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವಕ್ಕೆ ಪೂರ್ವಭಾವಿಯಾಗಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು. 114 ಮಂದಿ ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಸಿ 292 ಗೋಣಿ ಕಸ ಸಂಗ್ರಹಿಸಿದರು.
ಬಳಿಕ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಹೇಮಾವತಿ ವಿ.ಹೆಗ್ಗಡೆಯವರು ಮಾತನಾಡಿ, ಕಸ ಎಸೆದು ಸ್ವಚ್ಛತಾ ಕಾರ್ಯಕ್ರಮ ಮಾಡುವುದಕ್ಕಿಂತ ಕಸ ಎಸೆಯದಂತೆ ದೃಢ ಸಂಕಲ್ಪ ಮಾಡಿ ಮುಂಜಾಗರೂಕತೆ ವಹಿಸಬೇಕು. ಶಾಲಾ-ಕಾಲೇಜುಗಳ ಪಠ್ಯದಲ್ಲಿಯೇ ಸ್ವಚ್ಛತೆಯ ಪಾಠ ಕಲಿಸಬೇಕು ಎಂದು ಸಲಹೆ ನೀಡಿದರು. ಕಸ ಎಸೆದವನಿಂದಲೇ ಕಸ ಹೆಕ್ಕುವ ಅಭಿಯಾನ ಆರಂಭಿಸಿದಲ್ಲಿ ನಮ್ಮ ಪರಿಸರ ಸ್ವಚ್ಛವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಸುಪ್ರಿಯಾ ಹರ್ಷೇಂದ್ರಕುಮಾರ್, ಮನುಷ್ಯರಿಂದಾಗಿಯೇ ಪರಿಸರಕ್ಕೆ ಹಾನಿಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್, ಯೋಜನಾಧಿಕಾರಿ ಪ್ರವೀಣ್, ನಿರ್ದೇಶಕ ಲಕ್ಷ್ಮಣ್ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…
ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…