ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವಕ್ಕೆ ಪೂರ್ವಭಾವಿಯಾಗಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು. 114 ಮಂದಿ ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಸಿ 292 ಗೋಣಿ ಕಸ ಸಂಗ್ರಹಿಸಿದರು.
ಬಳಿಕ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಹೇಮಾವತಿ ವಿ.ಹೆಗ್ಗಡೆಯವರು ಮಾತನಾಡಿ, ಕಸ ಎಸೆದು ಸ್ವಚ್ಛತಾ ಕಾರ್ಯಕ್ರಮ ಮಾಡುವುದಕ್ಕಿಂತ ಕಸ ಎಸೆಯದಂತೆ ದೃಢ ಸಂಕಲ್ಪ ಮಾಡಿ ಮುಂಜಾಗರೂಕತೆ ವಹಿಸಬೇಕು. ಶಾಲಾ-ಕಾಲೇಜುಗಳ ಪಠ್ಯದಲ್ಲಿಯೇ ಸ್ವಚ್ಛತೆಯ ಪಾಠ ಕಲಿಸಬೇಕು ಎಂದು ಸಲಹೆ ನೀಡಿದರು. ಕಸ ಎಸೆದವನಿಂದಲೇ ಕಸ ಹೆಕ್ಕುವ ಅಭಿಯಾನ ಆರಂಭಿಸಿದಲ್ಲಿ ನಮ್ಮ ಪರಿಸರ ಸ್ವಚ್ಛವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಸುಪ್ರಿಯಾ ಹರ್ಷೇಂದ್ರಕುಮಾರ್, ಮನುಷ್ಯರಿಂದಾಗಿಯೇ ಪರಿಸರಕ್ಕೆ ಹಾನಿಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್, ಯೋಜನಾಧಿಕಾರಿ ಪ್ರವೀಣ್, ನಿರ್ದೇಶಕ ಲಕ್ಷ್ಮಣ್ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…