ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.
ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.
ಸ್ವಾಮೀಜಿ ಯುರೋಪ್ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…