ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.
ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.
ಸ್ವಾಮೀಜಿ ಯುರೋಪ್ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…