ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.
ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.
ಸ್ವಾಮೀಜಿ ಯುರೋಪ್ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…