ಗುತ್ತಿಗಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ತ್ರೈಮಾಸಿಕ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಪವರ್ಗದ ಸಭಾಭವನದಲ್ಲಿ ಭಾನುವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಅಚ್ಚುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ ವಲಯ ಮೇಲ್ವಿಚಾರಕ ಸುಧೀರ್ ಮಾಹಿತಿ ನೀಡಿದರು. ಈ ಸಂದರ್ಭ
ಸ್ವಚ್ಛತೆ, ಡೆಂಗ್ಯು ಜ್ವರದ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಯೋಜನೆ ಕಾರ್ಯದ ಬಗ್ಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ , ಒಕ್ಕೂಟದ ಉಪಾಧ್ಯಕ್ಷೆ ಕಲಾವತಿ ಮೊಟ್ಟೆಮನೆ, ಕಾರ್ಯದರ್ಶಿ ಶಶಿಕಲಾ ಅಡ್ಡನಪಾರೆ , ಕೋಶಾಧಿಕಾರಿ ರೇಣುಕಾ ಉಪಸ್ಥಿತರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…