ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ನಿರ್ಮಿಸಲಾದ ನೂತನ “ವನರಂಗ” ಬಯಲು ರಂಗಮಂದಿರವನ್ನು ಸೋಮವಾರ ಸಂಜೆ ಗಂಟೆ 5.30ಕ್ಕೆ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ ಮತ್ತು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀಧರ ಪೂಜಾರಿ ಶುಭಾಶಂಸನೆ ಮಾಡುವರು.
ನಾಟಕೋತ್ಸವ: ನೂತನ ರಂಗಮಂದಿರದಲ್ಲಿ ಡಿ 9 ರಿಂದ 12 ರವರೆಗೆ ಪ್ರತಿ ದಿನ ಸಂಜೆ 6.30 ರಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಸೋಮವಾರ: ಬರ್ಬರೀಕ, (ಧರ್ಮಸ್ಥಳದ ರಂಗಶಿವ ಕಲಾ ಬಳಗದವರಿಂದ), ಮಂಗಳವಾರ: ಮುದ್ದಣ್ಣನ ಪ್ರಮೋಶನ್ ಪ್ರಸಂಗ (ಉಜಿರೆಯ ಎಸ್.ಡಿ.ಎಂ. ಕಲಾಬಳಗದ ಕಲಾವಿದರಿಂದ), ನೀನಾಸಂ ನಾಟಕಗಳು: ಬುಧವಾರ: ರಾಕ್ಷಸ-ತಂಗಡಿ, ಗುರುವಾರ: ಕರ್ಣ ಸಾಂಗತ್ಯ
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…