ಧರ್ಮಸ್ಥಳ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ತಂಜಾವೂರಿನ ದಕ್ಷಿಣ ವಲಯ ಕೇಂದ್ರದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸಹಯೋಗದೊಂದಿಗೆ ಮಾ.10 ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಹಾಗೂ 11 ಮತ್ತು 12 ರಂದು (ಬುಧವಾರ ಮತ್ತು ಗುರುವಾರ) ಉಜಿರೆಯಲ್ಲಿ “ವನರಂಗ” ಬಯಲು ರಂಗಮಂದಿರದಲ್ಲಿ “ಭಾರತೀಯ ಲೋಕ ಉತ್ಸವ, ಧರ್ಮಸ್ಥಳ – 2020” ಆಯೋಜಿಸಲಾಗಿದೆ.
ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೊರಾಂ, ನಾಗಾಲ್ಯಾಂಡ್, ಸಿಕ್ಕಿಂ, ಕರ್ನಾಟಕ, ತ್ರಿಪುರಾ ಮೊದಲಾದ ರಾಜ್ಯಗಳಿಂದ ನೂರಾರು ಮಂದಿ ಜಾನಪದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.ಮಂಗಳವಾರ ಸಂಜೆ 6 ಗಂಟೆಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಸಮಾರಂಭವನ್ನು ಉದ್ಘಾಟಿಸುವರು.
ಪ್ರತಿ ದಿನ ಸಂಜೆ ಆರು ಗಂಟೆಯಿಂದ ಎಂಟು ಗಂಟೆವರೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರವನ್ನು ವೀಕ್ಷಿಸಲು ಕಲಾಭಿಮಾನಿಗಳಿಗೆ ಮುಕ್ತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…