ಧರ್ಮಸ್ಥಳ ಲಕ್ಷ ದೀಪೋತ್ಸವ: ಬೆಳ್ತಂಗಡಿ ತಾಲೂಕಿನಾದ್ಯಂತ ಸ್ವಚ್ಛತಾ ಅಭಿಯಾನ

November 17, 2019
6:00 PM

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 22 ರಿಂದ 27ರ ವರೆಗೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಭಾನುವಾರ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ನಡೆದ ಸ್ವಚ್ಛತಾ ಕಾರ್ಯದಲ್ಲಿ ಸಹಸ್ರಾರು ಜನ ಸ್ವಯಂ ಪ್ರೇರಣೆಯಿಂದ ಭಾಗವಸಿದರು.

ಉಜಿರೆಯಿಂದ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ತನಕ, ಬೆಳ್ತಂಗಡಿಯಿಂದ ಉಜಿರೆ ಪೇಟೆವರೆಗೆ, ಬೆಳ್ತಂಗಡಿ ಸಂತೆಕಟ್ಟೆಯಿಂದ ಬಸ್ ನಿಲ್ದಾಣದ ತನಕ, ಗುರುವಾಯನಕೆರೆ ಪೇಟೆಯಿಂದ ವಾಣಿ ವಿದ್ಯಾ ಸಂಸ್ಥೆಗಳವರೆಗೆ, ಮಡಂತ್ಯಾರು ಪೇಟೆ, ನಾರಾವಿ ಪೇಟೆ, ಹೊಸಂಗಡಿ, ಪಿಲ್ಯ, ಅಳದಂಗಡಿಯಲ್ಲಿ ಭಾನುವಾರ ಬೆಳಿಗ್ಯೆ ಏಳು ಗಂಟೆಯಿಂದ ಒಂಬತ್ತು ಗಂಟೆವರೆಗೆ ಜಾತಿ-ಮತ, ವಯಸ್ಸಿನ ಅಂತರವಿಲ್ಲದೆ ಸಾರ್ವಜನಿಕರು, ವಿದ್ಯಾರ್ಥಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಹಾಗೂ ಸ್ವಚ್ಛತಾ ಸೇನಾನಿಗಳು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. 21 ಕಡೆಗಳಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ 1728 ಮಂದಿ ಸ್ವಯಂ ಸೇವಕರು ಭಾಗವಹಿಸಿದರು. 413 ಗೋಣಿ ಚೀಲಗಳಲ್ಲಿ ಕಸವನ್ನು ಸಂಗ್ರಹಿಸಿ ಗ್ರಾಮ ಪಂಚಾಯಿತಿ ಹಾಗೂ ನಗರ ಪಂಚಾಯಿತಿ ಸ್ವಚ್ಛತಾ ವಾಹನದ ಮೂಲಕ ವಿಲೇವಾರಿ ಮಾಡಲಾಯಿತು.

ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಕಲ್ಮಂಜ ವೀರಕೇಸರಿ ಘಟಕ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಎಂ.ಶೆಟ್ಟಿ, ಉಜಿರೆಯ ಡಾ. ಎಂ.ಎಂ. ದಯಾಕರ್, ಭರತ್‍ ಕುಮಾರ್, ಮೋಹನ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಬೂದಪ್ಪಗೌಡ, ನಿರ್ದೇಶಕ ಲಕ್ಷ್ಮಣ ಎಂ. ಹಾಗೂ ಯೋಜನಾಧಿಕಾರಿಗಳಾದ ಜಯಕರ ಶೆಟ್ಟಿ, ಪ್ರವೀಣಕುಮಾರ್ ಮೊದಲಾದವರು ಅಭಿಯಾನದ ನೇತೃತ್ವ ವಹಿಸಿದರು.

ಕಳೆದ ಒಂದು ವರ್ಷದಲ್ಲಿ ಸ್ವಚ್ಛತಾ ಸೇನಾನಿಗಳು 481 ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸಿದ್ದು 21,986 ಮಂದಿ ಸ್ವಯಂ ಸೇವಕರಾಗಿ ಭಾಗವಹಿಸಿದ್ದಾರೆ. ನ.22 ರಂದು ಶುಕ್ರವಾರ ಉಜಿರೆ ಮೂಲಕ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರು ಹಾಗೂ ಸಾರ್ವಜನಿಕರು ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಪಾದಯಾತ್ರೆ ಸಮಿತಿಯವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror