Advertisement
ಸುದ್ದಿಗಳು

ಧರ್ಮಸ್ಥಳ ಲಕ್ಷ ದೀಪೋತ್ಸವ: ಬೆಳ್ತಂಗಡಿ ತಾಲೂಕಿನಾದ್ಯಂತ ಸ್ವಚ್ಛತಾ ಅಭಿಯಾನ

Share

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 22 ರಿಂದ 27ರ ವರೆಗೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಭಾನುವಾರ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ನಡೆದ ಸ್ವಚ್ಛತಾ ಕಾರ್ಯದಲ್ಲಿ ಸಹಸ್ರಾರು ಜನ ಸ್ವಯಂ ಪ್ರೇರಣೆಯಿಂದ ಭಾಗವಸಿದರು.

ಉಜಿರೆಯಿಂದ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ತನಕ, ಬೆಳ್ತಂಗಡಿಯಿಂದ ಉಜಿರೆ ಪೇಟೆವರೆಗೆ, ಬೆಳ್ತಂಗಡಿ ಸಂತೆಕಟ್ಟೆಯಿಂದ ಬಸ್ ನಿಲ್ದಾಣದ ತನಕ, ಗುರುವಾಯನಕೆರೆ ಪೇಟೆಯಿಂದ ವಾಣಿ ವಿದ್ಯಾ ಸಂಸ್ಥೆಗಳವರೆಗೆ, ಮಡಂತ್ಯಾರು ಪೇಟೆ, ನಾರಾವಿ ಪೇಟೆ, ಹೊಸಂಗಡಿ, ಪಿಲ್ಯ, ಅಳದಂಗಡಿಯಲ್ಲಿ ಭಾನುವಾರ ಬೆಳಿಗ್ಯೆ ಏಳು ಗಂಟೆಯಿಂದ ಒಂಬತ್ತು ಗಂಟೆವರೆಗೆ ಜಾತಿ-ಮತ, ವಯಸ್ಸಿನ ಅಂತರವಿಲ್ಲದೆ ಸಾರ್ವಜನಿಕರು, ವಿದ್ಯಾರ್ಥಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಹಾಗೂ ಸ್ವಚ್ಛತಾ ಸೇನಾನಿಗಳು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. 21 ಕಡೆಗಳಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ 1728 ಮಂದಿ ಸ್ವಯಂ ಸೇವಕರು ಭಾಗವಹಿಸಿದರು. 413 ಗೋಣಿ ಚೀಲಗಳಲ್ಲಿ ಕಸವನ್ನು ಸಂಗ್ರಹಿಸಿ ಗ್ರಾಮ ಪಂಚಾಯಿತಿ ಹಾಗೂ ನಗರ ಪಂಚಾಯಿತಿ ಸ್ವಚ್ಛತಾ ವಾಹನದ ಮೂಲಕ ವಿಲೇವಾರಿ ಮಾಡಲಾಯಿತು.

ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಕಲ್ಮಂಜ ವೀರಕೇಸರಿ ಘಟಕ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಎಂ.ಶೆಟ್ಟಿ, ಉಜಿರೆಯ ಡಾ. ಎಂ.ಎಂ. ದಯಾಕರ್, ಭರತ್‍ ಕುಮಾರ್, ಮೋಹನ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಬೂದಪ್ಪಗೌಡ, ನಿರ್ದೇಶಕ ಲಕ್ಷ್ಮಣ ಎಂ. ಹಾಗೂ ಯೋಜನಾಧಿಕಾರಿಗಳಾದ ಜಯಕರ ಶೆಟ್ಟಿ, ಪ್ರವೀಣಕುಮಾರ್ ಮೊದಲಾದವರು ಅಭಿಯಾನದ ನೇತೃತ್ವ ವಹಿಸಿದರು.

ಕಳೆದ ಒಂದು ವರ್ಷದಲ್ಲಿ ಸ್ವಚ್ಛತಾ ಸೇನಾನಿಗಳು 481 ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸಿದ್ದು 21,986 ಮಂದಿ ಸ್ವಯಂ ಸೇವಕರಾಗಿ ಭಾಗವಹಿಸಿದ್ದಾರೆ. ನ.22 ರಂದು ಶುಕ್ರವಾರ ಉಜಿರೆ ಮೂಲಕ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರು ಹಾಗೂ ಸಾರ್ವಜನಿಕರು ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಪಾದಯಾತ್ರೆ ಸಮಿತಿಯವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

3 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

10 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

17 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago