ಉಜಿರೆ: ಕಳೆದ 45 ವರ್ಷಗಳಲ್ಲಿ ಉತ್ತರಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ನೀಡಿದ ಧರ್ಮಸ್ಥಳದ ಎಸ್.ಡಿ.ಎಂ.ಸಂಚಾರಿ ಆಸ್ಪತ್ರೆಯನ್ನು ಭಾನುವಾರ ದೇವಸ್ಥಾನದ ಎದುರುಗಡೆ ನಡೆದ ಸರಳ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧಾರವಾಡದ ಎಸ್.ಡಿ.ಎಂ. ವಿಶ್ವವಿದ್ಯಾಲಯದ ನಿರ್ದೇಶಕ (ಆಡಳಿತ) ಸಾಕೇತ್ ಶೆಟ್ಟಿ ಅವರಿಗೆ “ಕೀ”ಯನ್ನು ನೀಡುವ ಮೂಲಕ ಆಸ್ಪತ್ರೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು.
ಸದ್ಯ ಉಭಯ ಜಿಲ್ಲೆಗಳಲ್ಲಿ ಹಲವಾರು ಆಸ್ಪತ್ರೆಗಳಿದ್ದು ಆರೋಗ್ಯ ಸೇವೆ ಲಭ್ಯ ಇರುವುದರಿಂದ ಸಂಚಾರಿ ಆಸ್ಪತ್ರೆಯನ್ನು ಧಾರವಾಡಕ್ಕೆ ಹಸ್ತಾಂತರಿಸಿದ್ದು, ಅಲ್ಲಿ ಸಮುದಾಯ ಆರೋಗ್ಯ ಸೇವೆ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಆರೋಗ್ಯ ಸೇವೆ ನೀಡಲಾಗುವುದು ಎಂದು ಹೆಗ್ಗಡೆಯವರು ತಿಳಿಸಿದರು.
ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರಿಯಾ ಹರ್ಷೇಂದ್ರಕುಮಾರ್, ಶ್ರದ್ಧಾ ಅಮಿತ್, ಕುಮಾರಿ ಮಾನ್ಯ, ನಿಶ್ಚಲ್ಕುಮಾರ್, ಡಾ. ಮೃಣಾಲಿನಿ, ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾರಾಯಣ ಪ್ರಭು ಮತ್ತು ಸಿಬ್ಬಂದಿ, ಎಸ್.ಡಿ.ಎಮ್. ಮೆಡಿಕಲ್ ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ, ಮಾಜಿ ಕಾರ್ಯದರ್ಶಿಗಳಾದ ಅನಂತಪದ್ಮನಾಭ ಭಟ್ ಮತ್ತು ಎ.ವಿ. ಶೆಟ್ಟಿ, ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣರಾವ್ ಉಪಸ್ಥಿತರಿದ್ದರು.
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…