ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ವ್ಯಾಪ್ತಿಗೊಳಪಡುವ ದೇವಸ್ಥಾನಗಳು, ಮಸೀದಿ, ಚರ್ಚ್ಗಳ ಧರ್ಮದರ್ಶಿಗಳೊಂದಿಗೆ ಸಭೆ ರಾಜೀವ್ಗಾಂಧಿ ಸಭಾಭವನದಲ್ಲಿ ನಡೆಯಿತು.
ಠಾಣೆಯ ಸಬ್ಇನ್ಸ್ಪೆಕ್ಟರ್ ಡಿ.ಎನ್ಈ.ರಯ್ಯ ಮಾತನಾಡಿ, “ಪೊಲೀಸರೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ . ದೇವಸ್ಥಾನ, ಮಸೀದಿ, ಚರ್ಚ್ ಮೇಲಿನ ಭದ್ರತೆ ಬಗ್ಗೆ ಪೊಲೀಸ್ ಇಲಾಖೆಗೆ ಕಾಳಜಿ ಇದೆ ಎಂದರು.
ಸಭೆಯಲ್ಲಿ ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ಮಸೀದಿ,ಚರ್ಚ್ಗಳಲ್ಲಿ ಗುಣಮಟ್ಟದ ಸಿಸಿಟಿವಿ ಅಳವಡಿಸುವ ಕುರಿತು, ಧಾರ್ಮಿಕ ಕೇಂದ್ರಗಳಿಗೆ ಆಗಮಿಸುವ ಅಪರಿಚಿತ ವ್ಯಕ್ತಿಗಳ ಮೇಲೆ ತೀವ್ರ ನಿಗಾವ ಇಡಲು ಹಾಗು ಮುಂಜಾಗ್ರತಾ ಕ್ರಮಗಳ ಕುರಿತು ಸಬ್ಇನ್ಸ್ಪೆಕ್ಟರ್ ಡಿ.ಎನ್ ಈರಯ್ಯ ಮಾಹಿತಿ ನೀಡಿದರು.
ಬೆಳ್ಳಾರೆ ಹಾಗು ಆಸುಪಾಸಿನ ಧಾರ್ಮಿಕ ಕೇಂದ್ರಗಳಿಗೆ ತೊಂದರೆಗಳು ಉಂಟಾದ ಸಮಯದಲ್ಲಿ ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಯಾವುದೇ ಅಂಜಿಕೆಯಿಲ್ಲದೆ ಪೊಲೀಸರಿಗೆ ಮಾಹಿತಿ ನೀಡಲು ಇದೇ ವೇಳೆ ಮನವಿ ಮಾಡಲಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…