Advertisement
ಸುದ್ದಿಗಳು

ಧಾರ್ಮಿಕ ಹಬ್ಬಗಳು ಭಾವೈಕ್ಯತೆ ಮೂಡಿಸುವ ಕೇಂದ್ರಗಳಾಗಲಿ

Share

ಪೆರ್ಲ: ಧಾರ್ಮಿಕ ಹಬ್ಬಗಳನ್ನು ಯಾವುದೇ ಧರ್ಮದವರು ಯಾವ ರೀತಿ ಆಚರಣೆ ಮಾಡಿದರೂ, ಅವೆಲ್ಲವೂ ಬಂದು ಸೇರುವುದು ಪರಮಾತ್ಮನ ಪಾದಕ್ಕೆ, ಆದುದರಿಂದ ಧಾರ್ಮಿಕ ಹಬ್ಬಗಳು ಭಾವೈಕ್ಯತೆ ಮೂಡಿಸುವ ಕೇಂದ್ರಗಳಾಲಿ ಎಂದು ಬಾಡೂರು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶಂಕರ್ ರೈ ಹೇಳಿದರು.

Advertisement
Advertisement

ಅನುವತ್ತಡ್ಕದಲ್ಲಿ ಜರಗಿದ ಹತ್ತನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಕೃಷ್ಣ ಪರಮಾತ್ಮನ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕ್ಕೊಳ್ಳಲು ಪ್ರಯತ್ನಿಸಬೇಕು. ಕಷ್ಟದಲ್ಲಿ ಇರುವವರೊಂದಿಗೆ ನಾವಿರಬೇಕು, ನಾಡಿನ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಬೇಕು.ಸ್ಪರ್ಧೆಗಳಲ್ಲಿ ಭಾಗವಹಿಸುವ ಮುಖಾಂತರ ಬುದ್ಧಿ ಶಕ್ತಿಯ ಬೆಳವಣಿಗೆ ಹಾಗೂ ನಮ್ಮೊಳಗಿನ ಪ್ರತಿಭೆಗಳನ್ನು ಪ್ರದರ್ಶಿಸಲು ಸಾಧ್ಯ.ಇಂತಹ ಕಾರ್ಯಕ್ರಮಗಳಲ್ಲಿ ಸ್ಥಳೀಯ ಪ್ರತಿಭೆಗಳನ್ನು, ಸಾಮಾಜಿಕ ಕಾರ್ಯಕರ್ತರನ್ನು ಗುರುತಿಸಿ ಹತ್ತು ಜನರ ಮುಂದೆ ಅಭಿನಂದಿಸುವ ಕಾರ್ಯ ನಡೆಯಲಿ ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಅಧ್ಯಾಪಕ ಸುಧೀರ್ ಕೃಷ್ಣ ಮಾತನಾಡಿ, ಶ್ರೀ ಕೃಷ್ಣನ ತಾಯಿ ದೇವಕಿಯ ನಿರಂತರ ಪ್ರಾರ್ಥನೆ, ಧ್ಯಾನದಿಂದಾಗಿ ಶ್ರೀ ಕೃಷ್ಣ ಜನಿಸಿದ, ಅದೇ ರೀತಿ ನಾವು ಪ್ರತಿಯೊಬ್ಬರೂ ನಿರಂತರ ಶ್ರಮ ಪಟ್ಟಲ್ಲಿ ಅದಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ.ನಾವು ಯಾವುದೇ ಸಾಧನೆ ಮಾಡಲು ಯತ್ನಿಸುವಾಗ ಒಂದೇ ಸಲದಲ್ಲಿ ನಾವು ಯಶಸ್ವಿಯಾಗದಿದ್ದರೂ, ಹಿನ್ನಡೆ ಅನುಭವಿಸಿದರೂ, ನಿರಂತರ ಮರು ಪ್ರಯತ್ನದಿಂದಾಗಿ ಖಂಡಿತವಾಗಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ.ಉಳಿದ ಪ್ರಾಣಿಗಳಿಂದ ವ್ಯತ್ಯಸ್ತನಾದ ಮಾನವನಲ್ಲಿ ಮಾನವೀಯತೆಯ, ಉಳಿದವರ ಕಷ್ಟಕ್ಕೆ ಸ್ಪಂದಿಸುವ, ನಮ್ಮಿಂದಾದ ಸಹಾಯ ಮಾಡುವ, ಪ್ರೀತಿಯಿಂದ ಮಾತನಾಡುವ ಗುಣ ಬೆಳೆಸಬೇಕು ಎಂದರು.

ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಥಳೀಯ ನಾಟಿ ವೈದ್ಯ ಮಹಾಲಿಂಗ ನಾಯ್ಕ ಪಳ್ಳತಮೂಲೆ, ಉಂಬೈ ಅನುವತ್ತಡ್ಕ, ರಾಮಣ್ಣ ಪತ್ತಡ್ಕ ಉಪಸ್ಥಿತರಿದ್ದರು.

Advertisement

ಮಾಲಿಂಗ ಪಳ್ಳತಮೂಲೆ ಸ್ವಾಗತಿಸಿದರು. ಸೌಮ್ಯ ವಂದಿಸಿದರು. ಗೋಪಾಲ ಮಾಸ್ಟರ್ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

57 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

8 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

8 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

11 hours ago