ಧರ್ಮಸ್ಥಳ : ಧೈರ್ಯ ಮತ್ತು ವಿಶ್ವಾಸವಿದ್ದಲ್ಲಿ ಯಶಸ್ವಿ ಉದ್ಯಮಿಗಳಾಗಬಹುದುಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಉಜಿರೆಯಲ್ಲಿ ಸ್ವ-ಉದ್ಯೋಗತರಬೇತಿಕೇಂದ್ರದಲ್ಲಿರುಡ್ಸೆಟ್ ಯಶಸ್ವೀ ಉದ್ಯಮಿಗಳ ಸಂಘ “ಆಸರೆ”ಆಶ್ರಯದಲ್ಲಿ ಆಯೋಜಿಸಿದ ಉದ್ಯಮಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾವಂತ ಯುವಜನತೆಗೆ ನೌಕರಿ ಸಿಗುವುದು ಕಷ್ಟ ಸಾಧ್ಯ. ಆದುದರಿಂದ ಕಠಿಣ ಪರಿಶ್ರಮದೊಂದಿಗೆ ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಬಹುದು.ತನ್ಮೂಲಕ ಯುವಜನತೆ ಸಾಮಾಜಿಕ ಪರಿವರ್ತನೆಯ ರೂವಾರಿಗಳಾಗಬೇಕು ಎಂದುಅ ವರು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ ಮಾತನಾಡಿ, ಬದುಕಿನಲ್ಲಿ ಎದುರಾಗುವ ಸಮಸ್ಯೆಗಳನ್ನು, ಸವಾಲುಗಳನ್ನು ಧೃತಿಗೆಡದೆ ಧೈರ್ಯದಿಂದ ಎದುರಿಸಿದಾಗ ಮಾತ್ರಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಾರಂಭಿಸಿದ ರುಡ್ಸೆಟ್ ಸಂಸ್ಥೆ ಇಂದುರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆಎಂದುವ ಮೆಚ್ಚುಗೆ ವ್ಯಕ್ತ ಪಡಿಸಿದರು.
ಕಳೆದ ಎಂಟು ವರ್ಷಗಳಲ್ಲಿ ಪ್ರತಿ ವರ್ಷ ಎಸ್.ಎಸ್.ಎಲ್.ಸಿ.ಪಬ್ಲಿಕ್ ಪರೀಕ್ಷೆಯಲ್ಲಿ ಶೇ.ನೂರು ಫಲಿತಾಂಶ ಪಡೆದಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ್ ಮತ್ತು ಆಸರೆ ಸಂಘಟನೆಯ ಸಕ್ರಿಯ ಕಾರ್ಯಕರ್ತ ಗೋಪಾಲಕೃಷ್ಣ ಅವರನ್ನು ಗೌರವಿಸಲಾಯಿತು.
ಸಿಂಡಿಕೇಟ್ ಬ್ಯಾಂಕಿನ ಪ್ರಾಂತೀಯ ಪ್ರಬಂಧಕಆರ್.ರಾಘವೇಂದ್ರ, ಮತ್ತು ಪುತ್ತೂರು ಶಾಖಾ ಪ್ರಬಂಧಕಕುಮಾರ್,ರುಡ್ಸೆಟ್ನ ಹಿರಿಯಉಪನ್ಯಾಸಕರಾದಜೇಮ್ಸ್ಅಬ್ರಾಹಂ ಮತ್ತುಅನಸೂಯ, ಸುನಿಲ್ ರೈ ಬೆಳ್ಳಾರೆ ಉಪಸ್ಥಿತರಿದ್ದರು.
“ಆಸರೆ” ಅಧ್ಯಕ್ಷ ವೆಂಕಟ್ರಮಣ ಪುಣಚ ಸ್ವಾಗತಿಸಿದರು.ಕಾರ್ಯದರ್ಶಿ ಪ್ರಶಾಂತ್ ಕುದ್ಯಾಡಿ ಧನ್ಯವಾದವಿತ್ತರು. ಕಡಬದ ನಾಗರಾಜ, ಎನ್.ಕೆ.ಮತ್ತುಪ್ರಶಾಂತ್ ಲಾೈಲ ಕಾರ್ಯಕ್ರಮ ನಿರ್ವಹಿಸಿದರು.
ಮುಖ್ಯಾಂಶಗಳು:
• 2010ರಲ್ಲಿ ರುಡ್ಸೆಟ್ ಯಶಸ್ವಿ ಉದ್ಯಮಿಗಳ ಸಂಘ “ಆಸರೆ” ಪ್ರಾರಂಭ.
• ದೇಶದಲ್ಲಿ 27 ರುಡ್ಸೆಟ್ ಸಂಸ್ಥೆಗಳು ಹಾಗೂ 586 ಆರ್ಸೆಟಿಗಳು ಕಾರ್ಯನಿರ್ವಹಿಸುತ್ತಿವೆ.
• ಅಲ್ಪಾವಧಿತರಬೇತಿ ಮೂಲಕಸ್ವ-ಉದ್ಯೋಗ ಪ್ರಾರಂಭಿಸಲು ಮಾರ್ಗದರ್ಶನ.
• ರುಡ್ಸೆಟ್ಕಾರ್ಯನಿರ್ವಹಣೆ ಬಗ್ಯೆ 12 ನಿಮಿಷಗಳ ಸಾಕ್ಷ್ಯಚಿತ್ರರೂಪಿಸಲಾಗಿದೆ.
• ಪ್ರತಿ ತಿಂಗಳ ಮೊದಲ ಭಾನುವಾರಉಜಿರೆಯಲ್ಲಿರುವರುಡ್ಸೆಟ್ ಸಂಸ್ಥೆಯಲ್ಲಿ “ಆಸರೆ” ಸದಸ್ಯರ ಸಮಾಲೋಚನಾ ಸಭೆ ನಡೆಯುತ್ತದೆ.
• ಆಸರೆ ಮೂಲಕ ದೀನ ದಲಿತರಿಗೆನೆರವು, ಸ್ವಚ್ಛತಾಆಂದೋಲನ, ಜಲಮರುಪೂರಣ ಮೊದಲಾದ ಸೇವಾ ಕಾರ್ಯಗಳನ್ನು ಮಾಡಲಾಗುತ್ತದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…