Categories: Uncategorized

ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಹಾಲಿನ ಉತ್ಪಾದನೆಗೆ ಮೇವಿನ ಕೊರೆತೆ , ರಾಸುಗಳ ಸಾಕಾಣಿಕೆಗೆ ಬಳಸುವ ಪಶು ಆಹಾರದ ಬೆಲೆ, ಸಾಗಾಣಿಕೆ ಮತ್ತು ಸಂಸ್ಕರಣೆ/ಪ್ಯಾಕಿಂಗ್ ವೆಚ್ಚ ದುಬಾರಿ, ನಿರ್ವಹಣಾ ವೆಚ್ಚ ಹೆಚ್ಚಾಗಿರುವುದರಿಂದ ಹಾಗೂ ಹಾಲಿನ ಸಂಗ್ರಹಣೆ ಕಡೆಮೆಯಾಗಿರುವ ನಿಟ್ಟಿನಲ್ಲಿ ಹಾಲಿನ ಉತ್ಪಾದನೆಗೆ ಪ್ರೋತ್ಸಾಹಿಸಲು ನಂದಿನಿ ಹಾಲಿನ ಮಾರುಕಟ್ಟೆ ದರವನ್ನು ಹೆಚ್ಚಿಸಿ, ರೈತರಿಗೆ ಉತ್ತಮ ದರ ನೀಡುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಹಾಗೂ ಕರ್ನಾಟಕ ಸಹಕಾರಿ ಹಾಲು ಮಹಾಮಂಡಳಿ ಆದೇಶದಂತೆ ರಾಜ್ಯಾದಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ಬೆಲೆಯನ್ನು ಪರಿಷ್ಕರಿಸಲಾಗಿದೆ. ಅದರಂತೆ ಫೆಬ್ರವರಿ 1 ರಿಂದ  ಅನ್ವಯವಾಗುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಂದಿನಿ  ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಈ ಕೆಳಕಂಡಂತೆ ಪರಿಷ್ಕಸಲಾಗಿದೆ ಎಂದು ದ.ಕ ಜಿಲ್ಲಾ ಹಾಲು ಒಕ್ಕೂಟದ  ಅಧ್ಯಕ್ಷ ರವಿರಾಜ ಹೆಗ್ಡೆ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಂದಿನಿ ಹಾಲು ಮತ್ತು ಮೊಸರನ್ನು ನಂದಿನಿ ಡೀಲರುಗಳು ಗರಿಷ್ಟ ಮಾರಾಟ ದರಕ್ಕೆ ಮೀರದಂತೆ ಮಾರಾಟ ಮಾಡಿ. ಗ್ರಾಹಕರಿಗೆ ಉತ್ತಮ ಸೇವೆ ನೀಡಲು ತಿಳಿಸಲಾಗಿದೆ.

ಪರಿಷ್ಕರಿತ ದರದ ವಿವರ ಇಂತಿವೆ:

ನಂದಿನಿ ಟೋನ್ಡ್ ಹಾಲು (500 ಮಿ.ಲೀ) ಹಳೆಯ ದರ ರೂ. 18  ಪರಿಷ್ಕೃತ ದರ ರೂ. 19,

ನಂದಿನಿ ಟೋನ್ಡ್ ಹಾಲು (1000 ಮಿ.ಲೀ) ಹಳೆಯ ದರ ರೂ.35, ಪರಿಷ್ಕೃತ  ದರ  ರೂ. 37,

Advertisement

ನಂದಿನಿ ಹೋಮೊಜಿನೈಸ್ಡ್ ಹಸುವಿನ ಹಾಲು (500 ಮಿ.ಲೀ) ಹಳೆಯ ದರ ರೂ. 20, ಪರಿಷ್ಕೃತ  ರೂ. 21,

ನಂದಿನಿ ಟೋನ್ಡ್ ಹಾಲು (6 ಲೀ. ಜಂಬೋ) ಹಳೆಯ ದರ  ರೂ. 234, ಪರಿಷ್ಕೃತ ದರ ರೂ. 249 ರೂ,

ನಂದಿನಿ ಶುಭಂ ಹಾಲು (500 ಮಿ.ಲೀ) ಹಳೆಯ ದರ ರೂ.21  ಪರಿಷ್ಕೃತ ದರ ರೂ. 22,

ನಂದಿನಿ ಸಮೃದ್ಧಿ ಹಾಲು (500 ಮಿ.ಲೀ) ಹಳೆಯ ದರ ರೂ. 23  ಪರಿಷ್ಕೃತ ದರ ರೂ. 24,

ಮೊಸರು (200 ಗ್ರಾಂ) ಹಳೆಯ ದರ ರೂ. 11  ಪರಿಷ್ಕೃತ ದರ ರೂ. 12 ,

Advertisement

ಮೊಸರು (415 ಗ್ರಾಂ) ಹಳೆಯ ದರ ರೂ. 20 ರೂ ಪರಿಷ್ಕೃತ ದರ ರೂ. 21 ,

ಮೊಸರು (1 ಕೆಜಿ) ಹಳೆಯ ದರ ರೂ. 43  ಪರಿಷ್ಕೃತ ದರ ರೂ. 45,

ಮೊಸರು (6 ಕೆಜಿ ಜಂಬೋ) ಹಳೆಯ ದರ ರೂ.  252  ಪರಿಷ್ಕೃತ ದರ ರೂ.  267 ಆಗಿದೆ.

ಒಕ್ಕೂಟದಲ್ಲಿ ಹಳೆಯ ದರಗಳು ಮುದ್ರಿತವಾಗಿರುವ ಪೌಚ್ ಫಿಲಂ ದಾಸ್ತಾನು ಮುಗಿಯುವವರೆಗೆ ಹಳೆಯ ದರಗಳು ಮುದ್ರಿತವಾಗಿರುವ ಪ್ಯಾಕೆಟ್‍ಗಳಲ್ಲಿ ನಂದಿನಿ ಹಾಲು ಮತ್ತು ಮೊಸರುನ್ನು ಪ್ಯಾಕ್ ಮಾಡಿ ಸರಬರಾಜು ಮಾಡಲಾಗುವುದು. ಎಲ್ಲಾ ಗ್ರಾಹಕರು ಹಾಗೂ ನಂದಿನಿ ಹಾಲಿನ ಅಧಿಕೃತ ಡೀಲರುಗಳುಪರಿಷ್ಕೃತ ದರದಲ್ಲಿಯೇ ವ್ಯವಹರಿಸಿ ಒಕ್ಕೂಟದೊಂದಿಗೆ ಸಹಕರಿಸಲು ದ.ಕ ಜಿಲ್ಲಾ ಹಾಲು ಒಕ್ಕೂಟದ  ಅಧ್ಯಕ್ಷ ರವಿರಾಜ ಹೆಗ್ಡೆ ಇವರ ಪ್ರಕಟಣೆ ತಿಳಿಸಿದೆ.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

1 hour ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

3 hours ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

7 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

11 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

11 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

11 hours ago