ಮಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಹಾಲಿನ ಉತ್ಪಾದನೆಗೆ ಮೇವಿನ ಕೊರೆತೆ , ರಾಸುಗಳ ಸಾಕಾಣಿಕೆಗೆ ಬಳಸುವ ಪಶು ಆಹಾರದ ಬೆಲೆ, ಸಾಗಾಣಿಕೆ ಮತ್ತು ಸಂಸ್ಕರಣೆ/ಪ್ಯಾಕಿಂಗ್ ವೆಚ್ಚ ದುಬಾರಿ, ನಿರ್ವಹಣಾ ವೆಚ್ಚ ಹೆಚ್ಚಾಗಿರುವುದರಿಂದ ಹಾಗೂ ಹಾಲಿನ ಸಂಗ್ರಹಣೆ ಕಡೆಮೆಯಾಗಿರುವ ನಿಟ್ಟಿನಲ್ಲಿ ಹಾಲಿನ ಉತ್ಪಾದನೆಗೆ ಪ್ರೋತ್ಸಾಹಿಸಲು ನಂದಿನಿ ಹಾಲಿನ ಮಾರುಕಟ್ಟೆ ದರವನ್ನು ಹೆಚ್ಚಿಸಿ, ರೈತರಿಗೆ ಉತ್ತಮ ದರ ನೀಡುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಹಾಗೂ ಕರ್ನಾಟಕ ಸಹಕಾರಿ ಹಾಲು ಮಹಾಮಂಡಳಿ ಆದೇಶದಂತೆ ರಾಜ್ಯಾದಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ಬೆಲೆಯನ್ನು ಪರಿಷ್ಕರಿಸಲಾಗಿದೆ. ಅದರಂತೆ ಫೆಬ್ರವರಿ 1 ರಿಂದ ಅನ್ವಯವಾಗುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಈ ಕೆಳಕಂಡಂತೆ ಪರಿಷ್ಕಸಲಾಗಿದೆ ಎಂದು ದ.ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಇವರ ಪ್ರಕಟಣೆ ತಿಳಿಸಿದೆ.
ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಂದಿನಿ ಹಾಲು ಮತ್ತು ಮೊಸರನ್ನು ನಂದಿನಿ ಡೀಲರುಗಳು ಗರಿಷ್ಟ ಮಾರಾಟ ದರಕ್ಕೆ ಮೀರದಂತೆ ಮಾರಾಟ ಮಾಡಿ. ಗ್ರಾಹಕರಿಗೆ ಉತ್ತಮ ಸೇವೆ ನೀಡಲು ತಿಳಿಸಲಾಗಿದೆ.
ಪರಿಷ್ಕರಿತ ದರದ ವಿವರ ಇಂತಿವೆ:
ನಂದಿನಿ ಟೋನ್ಡ್ ಹಾಲು (500 ಮಿ.ಲೀ) ಹಳೆಯ ದರ ರೂ. 18 ಪರಿಷ್ಕೃತ ದರ ರೂ. 19,
ನಂದಿನಿ ಟೋನ್ಡ್ ಹಾಲು (1000 ಮಿ.ಲೀ) ಹಳೆಯ ದರ ರೂ.35, ಪರಿಷ್ಕೃತ ದರ ರೂ. 37,
ನಂದಿನಿ ಹೋಮೊಜಿನೈಸ್ಡ್ ಹಸುವಿನ ಹಾಲು (500 ಮಿ.ಲೀ) ಹಳೆಯ ದರ ರೂ. 20, ಪರಿಷ್ಕೃತ ರೂ. 21,
ನಂದಿನಿ ಟೋನ್ಡ್ ಹಾಲು (6 ಲೀ. ಜಂಬೋ) ಹಳೆಯ ದರ ರೂ. 234, ಪರಿಷ್ಕೃತ ದರ ರೂ. 249 ರೂ,
ನಂದಿನಿ ಶುಭಂ ಹಾಲು (500 ಮಿ.ಲೀ) ಹಳೆಯ ದರ ರೂ.21 ಪರಿಷ್ಕೃತ ದರ ರೂ. 22,
ನಂದಿನಿ ಸಮೃದ್ಧಿ ಹಾಲು (500 ಮಿ.ಲೀ) ಹಳೆಯ ದರ ರೂ. 23 ಪರಿಷ್ಕೃತ ದರ ರೂ. 24,
ಮೊಸರು (200 ಗ್ರಾಂ) ಹಳೆಯ ದರ ರೂ. 11 ಪರಿಷ್ಕೃತ ದರ ರೂ. 12 ,
ಮೊಸರು (415 ಗ್ರಾಂ) ಹಳೆಯ ದರ ರೂ. 20 ರೂ ಪರಿಷ್ಕೃತ ದರ ರೂ. 21 ,
ಮೊಸರು (1 ಕೆಜಿ) ಹಳೆಯ ದರ ರೂ. 43 ಪರಿಷ್ಕೃತ ದರ ರೂ. 45,
ಮೊಸರು (6 ಕೆಜಿ ಜಂಬೋ) ಹಳೆಯ ದರ ರೂ. 252 ಪರಿಷ್ಕೃತ ದರ ರೂ. 267 ಆಗಿದೆ.
ಒಕ್ಕೂಟದಲ್ಲಿ ಹಳೆಯ ದರಗಳು ಮುದ್ರಿತವಾಗಿರುವ ಪೌಚ್ ಫಿಲಂ ದಾಸ್ತಾನು ಮುಗಿಯುವವರೆಗೆ ಹಳೆಯ ದರಗಳು ಮುದ್ರಿತವಾಗಿರುವ ಪ್ಯಾಕೆಟ್ಗಳಲ್ಲಿ ನಂದಿನಿ ಹಾಲು ಮತ್ತು ಮೊಸರುನ್ನು ಪ್ಯಾಕ್ ಮಾಡಿ ಸರಬರಾಜು ಮಾಡಲಾಗುವುದು. ಎಲ್ಲಾ ಗ್ರಾಹಕರು ಹಾಗೂ ನಂದಿನಿ ಹಾಲಿನ ಅಧಿಕೃತ ಡೀಲರುಗಳುಪರಿಷ್ಕೃತ ದರದಲ್ಲಿಯೇ ವ್ಯವಹರಿಸಿ ಒಕ್ಕೂಟದೊಂದಿಗೆ ಸಹಕರಿಸಲು ದ.ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಇವರ ಪ್ರಕಟಣೆ ತಿಳಿಸಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…