ಸುಳ್ಯ: ನಗರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸುಳ್ಯ ನಗರ ಪಂಚಾಯತ್ ನ ಅಭಿವೃದ್ಧಿಗೂ ಸಮಗ್ರ ಯೋಜನೆಯನ್ನು ರೂಪಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಹೇಳಿದ್ದಾರೆ.
ನಗರ ಪಂಚಾಯತ್ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸುಳ್ಯ ನಗರದ ಅಭಿವೃದ್ಧಿಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದ ಅವರು ನಗರ ಪಂಚಾಯತ್ ಚುನಾವಣೆಯ ಗೆಲುವಿಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಲೋಕಸಭಾ ಚುನಾವಣೆಯ ಗೆಲುವಿನಂತೆ ನಗರ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂದರು.
ಶಾಸಕ ಎಸ್.ಅಂಗಾರ, ಚುನಾವಣಾ ಉಸ್ತುವಾರಿ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಪಿ.ಕೆ.ಉಮೇಶ್, ಎ ವಿ ತೀರ್ಥರಾಮ ಬಿಜೆಪಿ ನ.ಪಂ. ಅಭ್ಯರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…