Advertisement
ಸುದ್ದಿಗಳು

ನಗರದ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಶಾಸಕ ಅಂಗಾರ ಸೂಚನೆ

Share

ಸುಳ್ಯ:  ಸುಳ್ಯ ನಗರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್‌.ಅಂಗಾರ ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಅವರಿಗೆ ಸೂಚನೆ ನೀಡಿದ್ದಾರೆ.

ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಆಧಿಕಾರಿಗಳನ್ನು ಕರೆಸಿ ಶಾಸಕರು ಮಾತುಕತೆ ನಡೆಸಿದರು. ನಗರದ ಬೀದಿದೀಪ ಸಮಸ್ಯೆ, ಸ್ವಚ್ಛತೆ, ಅನಧಿಕೃತ ಬ್ಯಾನರ್, ಕುಡಿಯುವ ನೀರು, ಚರಂಡಿ ರಿಪೇರಿ ಇತ್ಯಾದಿ ತುರ್ತು ಕೆಲಸಗಳನ್ನು ಕೂಡಲೇ ಮಾಡಬೇಕು. ನೂತನ ಚುನಾಯಿತ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಮತ್ತು ನ ಪಂ ಸದಸ್ಯ ವಿನಯ್ ಕುಮಾರ್ ಕಂದಡ್ಕ, ನಗರ ಕಾರ್ಯದರ್ಶಿ ಹರೀಶ್ ಬೂಡುಪನ್ನೆ, ಬೂಡು ರಾಧಾಕೃಷ್ಣ ರೈ ನ.ಪಂ ಸದಸ್ಯರು, ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಉಪಸ್ಥಿತರಿದ್ದು ಸದಸ್ಯರು ವಿವಿಧ ವಾರ್ಡ್ ಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರ ಮತ್ತು ಅಧಿಕಾರಿಗಳ ಗಮನಕ್ಕೆ ತಂದರು.

ಕುಡಿಯುವ ನೀರಿನ ಟ್ಯಾಂಕ್ ಗಳ ಸ್ವಚ್ಛತೆ ಕಾಪಾಡಲು, ಮನೆಗಳಿಂದ ಕಸವನ್ನು ಬೇರ್ಪಡಿಸಿ ಶೇಖರಿಸಲು ಸೂಚಿಸಲಾಯಿತು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಕಸವನ್ನು ಬೇರ್ಪಡಿಸಿ ನೀಡದಿದ್ದರೆ ಸಂಗ್ರಹಿಸುವುದು ಬೇಡ ಎಂದು ಸದಸ್ಯರು ಸಲಹೆ ನೀಡಿದರು. ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 hour ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

2 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

6 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago